ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಶುರು: 2 ಹಂತಗಳಲ್ಲಿ ಆನೆಗಳ ಆಗಮನ !

ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಶುರು: 2 ಹಂತಗಳಲ್ಲಿ ಆನೆಗಳ ಆಗಮನ !

Published : Aug 10, 2023, 11:03 AM IST

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರು ಅಣಿಯಾಗ್ತಿದೆ. ದಸರೆಗೆ ಸೊಬಗು ಹೆಚ್ಚಿಸುವ  ಗಜಪಡೆ ಸೆಪ್ಟಂಬರ್ 1ಕ್ಕೆ ಮೈಸೂರು ಪ್ರವೇಶ ಮಾಡಲಿದ್ದು, ಮೊದಲ ಹಂತದಲ್ಲಿ 9 ಆನೆಗಳು ಎಂಟ್ರಿ ಪಡೆಯಲಿವೆ. 

ನಾಡಹಬ್ಬ ದಸರಾಗೆ ಸೊಬಗು ಹೆಚ್ಚಿಸುವ ಗಜಪಡೆ ಸೆಪ್ಟೆಂಬರ್ 1ಕ್ಕೆ ಅರಮನೆ ನಗರಿ ಮೈಸೂರು(Mysore) ಪ್ರವೇಶಿಸಲಿವೆ. ದಸರಾಗೆ(Dasara) ಎರಡು ಹಂತದಲ್ಲಿ ಆನೆಗಳು ಮೈಸೂರಿಗೆ ಬರಲಿದ್ದು, ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನ ಅರಣ್ಯ ಇಲಾಖೆ(forest department) ಬಿಡುಗಡೆ ಮಾಡಿದೆ. ನಾಗರಹೊಳೆಯ ಮತ್ತಿಗೋಡು ಅರಣ್ಯ ಶಿಬಿರದ ಕ್ಯಾಪ್ಟನ್ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸಲಿದ್ದು. ಬಳ್ಳೆ ಆನೆ ಶಿಬಿರದಿಂದ ಅರ್ಜುನ, ದುಬಾರೆ ಆನೆ  ಶಿಬಿರದಿಂದ ಧನಂಜಯ, ಗೋಪಿ, ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರತಿ, ದುಬಾರೆ ಶಿಬಿರದಿಂದ ವಿಜಯ, ಭೀಮನಕಟ್ಟೆ ಶಿಬಿರದಿಂದ ವರಲಕ್ಷ್ಮೀ ಆನೆ ಮೊದಲ ತಂಡದಲ್ಲಿ ಬರಲಿವೆ. ಈ ಬಾರಿಯ ದಸರೆಯಲ್ಲಿ ಒಟ್ಟು 14 ಆನೆಗಳು(Elephants) ಭಾಗವಹಿಸಲಿದ್ದು, 5 ಹೊಸ ಆನೆಗಳು ಮೊದಲ ಬಾರಿಗೆ ದಸರಾಗೆ ಬರಲಿವೆ. ಎರಡನೇ ಹಂತದಲ್ಲಿ ಯಾವ ಆನೆಗಳನ್ನು ಕಳುಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರೊಟ್ಟಿಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದೇ ಮೊದಲ ಬಾರಿಗೆ ಶಿವಮೊಗ್ಗದ ಸಕ್ಕರೆಬೈಲು ಆನೆ ಶಿಬಿರದಿಂದ ಹೊಸ ಆನೆ ತರಲು ಚಿಂತನೆ ಮಾಡಿದ್ದು, ಹೊಸ ಆನೆಗಳ ಹೆಲ್ತ್ ಕಾರ್ಡ್ ಹಾಗೂ ಆನೆಗಳ‌ ಚಲನವಲನ ಶಬ್ಧಗಳ ಪರಿಚಯಿಸಲಾಗುತ್ತಿದೆ. ಅಂತಿಮವಾಗಿ ಆನೆಗಳ ಚಲನವಲನ ಗಮನಿಸಿ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಚಾಕೊಲೇಟ್ ಪ್ರಿಯರೇ ಎಚ್ಚರ..ಎಚ್ಚರ..!: ಕರಾವಳಿ ಚಾಕೋಲೇಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more