ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?

ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?

Published : Feb 04, 2026, 05:29 PM IST

ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಪ್ರದೇಶದಲ್ಲಿ ಶತಮಾನಗಳಷ್ಟು ಹಳೆಯದಾದ ನಿಗೂಢ ಸುರಂಗ ಮಾರ್ಗಗಳಿವೆ. ರಾಜರ ಕಾಲದಿಂದ ಬ್ರಿಟಿಷರವರೆಗೆ ಇಲ್ಲಿ ಚಿನ್ನದ ಗಣಿಗಾರಿಕೆ ನಡೆದಿದೆ ಎಂದು ಸ್ಥಳೀಯರು ಬಲವಾಗಿ ನಂಬಿದ್ದರೂ, ಅಧಿಕೃತ ದಾಖಲೆಗಳಲ್ಲಿ ಇದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. 

ಇವತ್ತು ನಿಮಗೊಂದು ಸಿನಿಮಿಯಾ ಸ್ಟೋರಿಯೊಂದನ್ನು ಹೇಳುತ್ತಿದ್ದೇವೆ. ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಪ್ರದೇಶದಲ್ಲಿ ನಿಗೂಢ ಹಾಗೂ ದುರ್ಗಮವಾದ ಸುರಂಗ ಮಾರ್ಗಗಳು ಶತಮಾನಗಳ ಕಾಲದಿಂದಲೂ ಇವೆ. ಏಕಿವೆ ಅನ್ನೋದನ್ನ ಕೇಳಿದ್ರೆ ನಿಜಕ್ಕೂ ಅಚ್ಚರಿಯಾಗುತ್ತದೆ. ಹೌದು, ರಾಜ ಮಹರಾಜರುಗಳ ಕಾಲದಿಂದಲೂ ಇಲ್ಲಿ ಚಿನ್ನದ ಗಣಿಗಾರಿಕೆ ನಡೆದಿದೆ. ಬ್ರಿಟಿಷರು ಕೂಡ ಇಲ್ಲಿ ಸಾಕಷ್ಟು ಚಿನ್ನವನ್ನು ಕೆರೆದುಕೊಂಡು ಹೋಗಿದ್ದಾರೆ. ಆದ್ರೆ, ನಮ್ಮ ಅಧಿಕೃತ ದಾಖಲೆಗಳಲ್ಲಿ ಮಾತ್ರ ಇಲ್ಲೊಂದು ಗಣಿಗಾರಿಕೆ ನಡೆದಿತ್ತು. ಚಿನ್ನದ ನಿಕ್ಷೇಪವಿತ್ತು ಅನ್ನೋ ಮಾಹಿತಿ ಇಲ್ಲ. ಆದ್ರೆ, ಸುವರ್ಣ ನ್ಯೂಸ್​​​ ಆ ದುರ್ಗಮ ಸುರಂಗವನ್ನು ಹೊಕ್ಕು ಅದ್ರೊಳಗೆ ಏನಿದೆ ಅನ್ನೋದನ್ನ ಪತ್ತೆ ಮಾಡಿದೆ. ಆ ಡೀಟೈಲ್​​ ಇಲ್ಲಿದೆ ನೋಡಿ

ಕಪ್ಪತಗುಡ್ಡ ಅರಣ್ಯ ಪ್ರದೇಶ ಸೇರಿದಂತೆ ಇಲ್ಲಿನ ಸುತ್ತಮೂತ್ತಲೂ ಸಾಕಷ್ಟು ಕಡೆಗಳಲ್ಲಿ ಚಿನ್ನದ ನಿಕ್ಷೇಪಗಳು ಇವೆಯಂತೆ. ಕಣಿವೆಹೊಸೂರಿನಲ್ಲಿಯೂ ಚಿನ್ನದ ಗಣಿಗಾರಿಕೆ ನಡೆಯುತ್ತಿತ್ತು ಅಂತ ಇಲ್ಲಿನ ಜನ್ರು ಹೇಳ್ತಾರೆ. ಯಾರೋ ಒಬ್ರು ಇಬ್ರು ಹೇಳಿದ್ರೆ, ಈ ಮಾತನ್ನು ಅಲ್ಲಗಳೆಯ ಬಹುದಿತ್ತು. ಆದ್ರೆ, ಇಲ್ಲಿನ ಮನೆಮನೆಯಲ್ಲೂ ಹಿರಿಯರು ಇದೇ ಮಾತುಗಳನ್ನು ಇಲ್ಲಿನ ಜನ್ರಿಗೆ ಹೇಳಿಕೊಂಡು ಬಂದಿದ್ದಾರೆ. ಹೀಗಾಗಿ ಇಲ್ಲಿನ ಜನ್ರು ಈ ವಿಷ್ಯವನ್ನು ಪ್ರಬಲವಾಗಿ ನಂಬ್ಕೊಂಡು ಬಂದಿದ್ದಾರೆ.
 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more