THO ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮೌನಕ್ಕೆ ಶರಣಾದ ಮೈಸೂರು ಡಿಸಿ

Aug 23, 2020, 2:47 PM IST

ಮೈಸೂರು (ಆ. 23): THO ನಾಗೇಂದ್ರ ಆತ್ಮಹತ್ಯೆ ಪ್ರಕರಣ ಹಿನ್ನಲೆ ವೈದ್ಯಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಕೊರೊನಾ ಟೆಸ್ಟ್, ಚಿಕಿತ್ಸೆಯನ್ನು ಸ್ಥಗಿತಗೊಳಿಸಿದ್ದಾರೆ. ರಾಜಕೀಯ ವಲಯದಲ್ಲಿಯೂ ಸಹ ಈ ಕೇಸ್ ಸಂಚಲನ ಮೂಡಿಸಿದೆ. ಆದರೆ ಪ್ರಕರಣದ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಮೌನಕ್ಕೆ ಶರಣಾಗಿದ್ದಾರೆ. 2 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಜಿಲ್ಲಾಧಿಕಾರಿಗಳ ಮೌನ ಕುತೂಹಲ ಮೂಡಿಸಿದೆ. 

ಮೈಸೂರಿನಲ್ಲಿ ಕೋವಿಡ್ 19 ನ್ನು ಸಮರ್ಥವಾಗಿ ನಿಭಾಯಿಸುವಲ್ಲಿ,  ನಿಯಂತ್ರಿಸುವಲ್ಲಿ ಅಭಿರಾಮ್ ಶಂಕರ್ ಯಶಸ್ವಿಯಾಗಿದ್ದರು. ಇವರ ಕಾರ್ಯ ವೈಖರಿ ಬಗ್ಗೆ ಸಾರ್ವಜನಕ ಪ್ರಶಂಸೆ ಕೂಡಾ ವ್ಯಕ್ತವಾಗಿತ್ತು. ದಿಟ್ಟ ಅಧಿಕಾರಿ ಎಂದೇ ಹೆಸರು ಪಡೆದಿರುವ ಅಭಿರಾಮ್, ಮೌನ ವಹಿಸಿದ್ದು ಯಾಕೆ ಎಂಬುದು ಪ್ರಶ್ನೆಯಾಗಿದೆ. ಮೌನದ ಹಿಂದಿರುವ ಸಾಧ್ಯಾಸಾಧ್ಯತೆ ಬಗ್ಗೆ ಇಲ್ಲಿದೆ ಮಾಹಿತಿ...!

ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: IAS ಅಧಿಕಾರಿ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು