ಮುಡಾ ಹಗರಣ ಆರೋಪಿ ಸಿದ್ದರಾಮಯ್ಯ ಬಗ್ಗೆ ಮೈಸೂರು ಜನತೆ ಹೇಳೋದೇನು?

ಮುಡಾ ಹಗರಣ ಆರೋಪಿ ಸಿದ್ದರಾಮಯ್ಯ ಬಗ್ಗೆ ಮೈಸೂರು ಜನತೆ ಹೇಳೋದೇನು?

Published : Oct 07, 2024, 08:29 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಈ ಹಗರಣದ ಬಗ್ಗೆ ಮೈಸೂರು ಜನತೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು (ಅ.07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದುಕೊಂಡಿರುವುದು ದೊಡ್ಡ ಹಗರಣಾಗಿ ಪರಿಣಮಿಸಿದೆ. ಆದರೆ, ಈ ಹಗರಣದ ಆರೋಪ ತಮ್ಮ ಸಿಎಂ ಕುರ್ಚಿಗೆ ಕಂಟಕವಾದ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ಆದರೆ, ಈ ಬಗ್ಗೆ ಮೈಸೂರಿನ ಜನತೆ ಏನು ಹೇಳ್ತಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಮೈಸೂರಿನ ವ್ಯಕ್ತಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸೈಟು ಪಡೆದುಕೊಂಡಿದ್ದಾರೆ ಎಂಬ ಕಾರಣದಿಂದಲೇ ಮುಡಾ ಹಗರಣ ಹೊರಗೆ ಬಂದಿದೆ. ಅದನ್ನು ವಿಪಕ್ಷಗಳು ಎತ್ತಿಕಟ್ಟಿ ರಾಜ್ಯದ ಜನತೆಗೆ ಜಗಜ್ಜಾಹೀರು ಮಾಡಿದ್ದಾರೆ. ಆದರೆ, ಇದೀಗ ಈ ವಿವಾದದಿಂದ ಬೇಸತ್ತ ಸಿದ್ದರಾಮಯ್ಯ ಅವರ ಪತ್ನಿ ಎಲ್ಲ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ನಮ್ಮ ಸಿದ್ದರಾಮಯ್ಯ ಅವರಂತಹ ಮುಖ್ಯಮಂತ್ರಿ ನಮ್ಮ ದೇಶದಲ್ಲಿ ಎಲ್ಲಿಯೂ ಇಲ್ಲ. ಬಡಜನರ ಅಭಿವೃದ್ಧಿಗೆ ಕಂಕಣಬದ್ಧರಾಗಿ ನಿಂತಿದ್ದಾರೆ. ಆದರೆ, ಈಗ ಒಂದು ಹಗರಣ ಬಂದಿದೆ ಎಂದು ರಾಜೀನಾಮೆ ಪಡೆಯಬೇಕು ಎಂಬುದು ಸಖ್ಯವಲ್ಲ. ಸಿಎಂ ಮುಡಾ ಹಗರಣದ ವಿರುದ್ಧ ಕಾನೂನು ತನಿಖೆ ನಡೆಯುತ್ತಿದ್ದು, ಏನಾಗುತ್ತದೆ ನೋಡೋಣ ಎಂದು ಮೈಸೂರು ಜನತೆ ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!