ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸಾತಿಗೆ ಪತ್ರ; ಅಮಾಯಕರಿಗೆ ಶಿಕ್ಷೆ ಸಲ್ಲದೆಂದ ತನ್ವೀರ್‌ ಸೇಠ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸಾತಿಗೆ ಪತ್ರ; ಅಮಾಯಕರಿಗೆ ಶಿಕ್ಷೆ ಸಲ್ಲದೆಂದ ತನ್ವೀರ್‌ ಸೇಠ್‌

Published : Jul 26, 2023, 05:47 PM IST

ನಾನು ತಪ್ಪಿತಸ್ಥರನ್ನು ಬಿಡಬೇಕು ಅಂತಾ ಪತ್ರ ಬರೆದಿಲ್ಲ. ಅಮಾಯಕರು ಅಥವಾ ವಿದ್ಯಾರ್ಥಿಗಳು ವಿನಾಕಾರಣ ಶಿಕ್ಷೆ ಅನುಭವಿಸೋದು ಬೇಡ ಅನ್ನೋದೇ ನನ್ನ ಕಳಕಳಿಯಾಗಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಬೆಂಗಳೂರು (ಜು.26): ನಾನು ತಪ್ಪಿತಸ್ಥರನ್ನು ಬಿಡಬೇಕು ಅಂತಾ ಪತ್ರ ಬರೆದಿಲ್ಲ. ಅಥವಾ ಒಂದು ಕೋಮಿನ ವಿಚಾರವನ್ನು ಕೂಡಾ ಪ್ರಸ್ತಾಪ ಮಾಡಿಲ್ಲ. ಅಮಾಯಕರು ಅಥವಾ ವಿದ್ಯಾರ್ಥಿಗಳು ವಿನಾಕಾರಣ ಶಿಕ್ಷೆ ಅನುಭವಿಸೋದು ಬೇಡ ಅನ್ನೋದೇ ನನ್ನ ಕಳಕಳಿಯಾಗಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಬೆಂಗಳೂರಿನ ಡಿ.ಜೆ. ಹಳ್ಳಿ, ಕೆಜಿ ಹಳ್ಳಿ, ಹುಬ್ಬಳ್ಳಿ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧಡೆ ನಡೆದ ಗಲಭೆಗಳಲ್ಲಿ ಮೊಕದ್ದಮೆ ಮರು ಪರಿಶೀಲಿಸಿ ಅಮಾಯಕರ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದ ಕುರಿತು ಮಾಧ್ಯಮಗಳೊಂದಿಗೆ ಶಾಸಕ ತನ್ವೀರ್‌ ಸೇಠ್‌ ಮಾತನಾಡಿದರು. ಬಿಜೆಪಿಯವರು ಆರೋಪ ಮಾಡ್ತಾ ಇರುವಂತೆ ನಾವು ಒಂದು ಕೋಮು ಓಲೈಕೆ ಮಾಡುವ ಕೆಲಸ ಮಾಡ್ತಾ ಇಲ್ಲ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳಬೇಕು ಎಂಬುದು ನನ್ನ ಆಶಯವಾಗಿದೆ ಎಂದರು.

ಸ್ವತಃ ನನ್ನ ಮೇಲೆ ಆದ ಹಲ್ಲೆ ಬಗ್ಗೆ ಕೂಡಾ ಸರ್ಕಾರ ಸರಿಯಾದ ತನಿಖೆ ನಡೆಸಿಲ್ಲ. ಅದರ ಬಗ್ಗೆ ಕೂಡಾ ತನಿಖೆ ನಡೆಸಿ ಅಂತಾ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಅದರ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ. ನಮ್ಮದೇ ಪಕ್ಷದ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕೂಡಾ ತಪ್ಪಿತಸ್ಥರನ್ನು ಬಿಡಿ ಅಂತಾ ನಾನು ಹೇಳಿಲ್ಲ. ಆ ಗಲಭೆ ಆದ ಹಿನ್ನಲೆ ಏನು ಅಂತಲೂ ಎಲ್ಲರಿಗೂ ಗೊತ್ತಿದೆ. ಬಿಜೆಪಿಯವರು ಆರೋಪ ಮಾಡ್ತಾ ಇರುವ ರೀತಿ  ನಾವು ಓಲೈಕೆ ಮಾಡ್ತಾ ಇಲ್ಲ. ಒಟ್ಟಾರೆ ಅಮಾಯಕರಿಗೆ  ಶಿಕ್ಷೆ ಆಗಬಾರದು ಎಂಬುದೇ ನನ್ನ ಉದ್ದೇಶವಾಗಿದೆ. ಗೃಹ ಸಚಿವ ಪರಮೇಶ್ವರ್ ಅವರೂ ಕೂಡಾ ತಳಮಟ್ಟದಿಂದ ಬಂದವರು. ಅವರು ಕೂಡಾ ಅರ್ಥ ಮಾಡಿಕೊಂಡು ಈ ಪತ್ರದ ಬಗ್ಗೆ ಕ್ರಮ ತೆಗದುಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ಹೇಳಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more