ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸಾತಿಗೆ ಪತ್ರ; ಅಮಾಯಕರಿಗೆ ಶಿಕ್ಷೆ ಸಲ್ಲದೆಂದ ತನ್ವೀರ್‌ ಸೇಠ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸಾತಿಗೆ ಪತ್ರ; ಅಮಾಯಕರಿಗೆ ಶಿಕ್ಷೆ ಸಲ್ಲದೆಂದ ತನ್ವೀರ್‌ ಸೇಠ್‌

Published : Jul 26, 2023, 05:47 PM IST

ನಾನು ತಪ್ಪಿತಸ್ಥರನ್ನು ಬಿಡಬೇಕು ಅಂತಾ ಪತ್ರ ಬರೆದಿಲ್ಲ. ಅಮಾಯಕರು ಅಥವಾ ವಿದ್ಯಾರ್ಥಿಗಳು ವಿನಾಕಾರಣ ಶಿಕ್ಷೆ ಅನುಭವಿಸೋದು ಬೇಡ ಅನ್ನೋದೇ ನನ್ನ ಕಳಕಳಿಯಾಗಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಬೆಂಗಳೂರು (ಜು.26): ನಾನು ತಪ್ಪಿತಸ್ಥರನ್ನು ಬಿಡಬೇಕು ಅಂತಾ ಪತ್ರ ಬರೆದಿಲ್ಲ. ಅಥವಾ ಒಂದು ಕೋಮಿನ ವಿಚಾರವನ್ನು ಕೂಡಾ ಪ್ರಸ್ತಾಪ ಮಾಡಿಲ್ಲ. ಅಮಾಯಕರು ಅಥವಾ ವಿದ್ಯಾರ್ಥಿಗಳು ವಿನಾಕಾರಣ ಶಿಕ್ಷೆ ಅನುಭವಿಸೋದು ಬೇಡ ಅನ್ನೋದೇ ನನ್ನ ಕಳಕಳಿಯಾಗಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಬೆಂಗಳೂರಿನ ಡಿ.ಜೆ. ಹಳ್ಳಿ, ಕೆಜಿ ಹಳ್ಳಿ, ಹುಬ್ಬಳ್ಳಿ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧಡೆ ನಡೆದ ಗಲಭೆಗಳಲ್ಲಿ ಮೊಕದ್ದಮೆ ಮರು ಪರಿಶೀಲಿಸಿ ಅಮಾಯಕರ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದ ಕುರಿತು ಮಾಧ್ಯಮಗಳೊಂದಿಗೆ ಶಾಸಕ ತನ್ವೀರ್‌ ಸೇಠ್‌ ಮಾತನಾಡಿದರು. ಬಿಜೆಪಿಯವರು ಆರೋಪ ಮಾಡ್ತಾ ಇರುವಂತೆ ನಾವು ಒಂದು ಕೋಮು ಓಲೈಕೆ ಮಾಡುವ ಕೆಲಸ ಮಾಡ್ತಾ ಇಲ್ಲ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳಬೇಕು ಎಂಬುದು ನನ್ನ ಆಶಯವಾಗಿದೆ ಎಂದರು.

ಸ್ವತಃ ನನ್ನ ಮೇಲೆ ಆದ ಹಲ್ಲೆ ಬಗ್ಗೆ ಕೂಡಾ ಸರ್ಕಾರ ಸರಿಯಾದ ತನಿಖೆ ನಡೆಸಿಲ್ಲ. ಅದರ ಬಗ್ಗೆ ಕೂಡಾ ತನಿಖೆ ನಡೆಸಿ ಅಂತಾ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಅದರ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ. ನಮ್ಮದೇ ಪಕ್ಷದ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕೂಡಾ ತಪ್ಪಿತಸ್ಥರನ್ನು ಬಿಡಿ ಅಂತಾ ನಾನು ಹೇಳಿಲ್ಲ. ಆ ಗಲಭೆ ಆದ ಹಿನ್ನಲೆ ಏನು ಅಂತಲೂ ಎಲ್ಲರಿಗೂ ಗೊತ್ತಿದೆ. ಬಿಜೆಪಿಯವರು ಆರೋಪ ಮಾಡ್ತಾ ಇರುವ ರೀತಿ  ನಾವು ಓಲೈಕೆ ಮಾಡ್ತಾ ಇಲ್ಲ. ಒಟ್ಟಾರೆ ಅಮಾಯಕರಿಗೆ  ಶಿಕ್ಷೆ ಆಗಬಾರದು ಎಂಬುದೇ ನನ್ನ ಉದ್ದೇಶವಾಗಿದೆ. ಗೃಹ ಸಚಿವ ಪರಮೇಶ್ವರ್ ಅವರೂ ಕೂಡಾ ತಳಮಟ್ಟದಿಂದ ಬಂದವರು. ಅವರು ಕೂಡಾ ಅರ್ಥ ಮಾಡಿಕೊಂಡು ಈ ಪತ್ರದ ಬಗ್ಗೆ ಕ್ರಮ ತೆಗದುಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ಹೇಳಿದರು. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more