ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸಾತಿಗೆ ಪತ್ರ; ಅಮಾಯಕರಿಗೆ ಶಿಕ್ಷೆ ಸಲ್ಲದೆಂದ ತನ್ವೀರ್‌ ಸೇಠ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸಾತಿಗೆ ಪತ್ರ; ಅಮಾಯಕರಿಗೆ ಶಿಕ್ಷೆ ಸಲ್ಲದೆಂದ ತನ್ವೀರ್‌ ಸೇಠ್‌

Published : Jul 26, 2023, 05:47 PM IST

ನಾನು ತಪ್ಪಿತಸ್ಥರನ್ನು ಬಿಡಬೇಕು ಅಂತಾ ಪತ್ರ ಬರೆದಿಲ್ಲ. ಅಮಾಯಕರು ಅಥವಾ ವಿದ್ಯಾರ್ಥಿಗಳು ವಿನಾಕಾರಣ ಶಿಕ್ಷೆ ಅನುಭವಿಸೋದು ಬೇಡ ಅನ್ನೋದೇ ನನ್ನ ಕಳಕಳಿಯಾಗಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಬೆಂಗಳೂರು (ಜು.26): ನಾನು ತಪ್ಪಿತಸ್ಥರನ್ನು ಬಿಡಬೇಕು ಅಂತಾ ಪತ್ರ ಬರೆದಿಲ್ಲ. ಅಥವಾ ಒಂದು ಕೋಮಿನ ವಿಚಾರವನ್ನು ಕೂಡಾ ಪ್ರಸ್ತಾಪ ಮಾಡಿಲ್ಲ. ಅಮಾಯಕರು ಅಥವಾ ವಿದ್ಯಾರ್ಥಿಗಳು ವಿನಾಕಾರಣ ಶಿಕ್ಷೆ ಅನುಭವಿಸೋದು ಬೇಡ ಅನ್ನೋದೇ ನನ್ನ ಕಳಕಳಿಯಾಗಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಬೆಂಗಳೂರಿನ ಡಿ.ಜೆ. ಹಳ್ಳಿ, ಕೆಜಿ ಹಳ್ಳಿ, ಹುಬ್ಬಳ್ಳಿ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧಡೆ ನಡೆದ ಗಲಭೆಗಳಲ್ಲಿ ಮೊಕದ್ದಮೆ ಮರು ಪರಿಶೀಲಿಸಿ ಅಮಾಯಕರ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದ ಕುರಿತು ಮಾಧ್ಯಮಗಳೊಂದಿಗೆ ಶಾಸಕ ತನ್ವೀರ್‌ ಸೇಠ್‌ ಮಾತನಾಡಿದರು. ಬಿಜೆಪಿಯವರು ಆರೋಪ ಮಾಡ್ತಾ ಇರುವಂತೆ ನಾವು ಒಂದು ಕೋಮು ಓಲೈಕೆ ಮಾಡುವ ಕೆಲಸ ಮಾಡ್ತಾ ಇಲ್ಲ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳಬೇಕು ಎಂಬುದು ನನ್ನ ಆಶಯವಾಗಿದೆ ಎಂದರು.

ಸ್ವತಃ ನನ್ನ ಮೇಲೆ ಆದ ಹಲ್ಲೆ ಬಗ್ಗೆ ಕೂಡಾ ಸರ್ಕಾರ ಸರಿಯಾದ ತನಿಖೆ ನಡೆಸಿಲ್ಲ. ಅದರ ಬಗ್ಗೆ ಕೂಡಾ ತನಿಖೆ ನಡೆಸಿ ಅಂತಾ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಅದರ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ. ನಮ್ಮದೇ ಪಕ್ಷದ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕೂಡಾ ತಪ್ಪಿತಸ್ಥರನ್ನು ಬಿಡಿ ಅಂತಾ ನಾನು ಹೇಳಿಲ್ಲ. ಆ ಗಲಭೆ ಆದ ಹಿನ್ನಲೆ ಏನು ಅಂತಲೂ ಎಲ್ಲರಿಗೂ ಗೊತ್ತಿದೆ. ಬಿಜೆಪಿಯವರು ಆರೋಪ ಮಾಡ್ತಾ ಇರುವ ರೀತಿ  ನಾವು ಓಲೈಕೆ ಮಾಡ್ತಾ ಇಲ್ಲ. ಒಟ್ಟಾರೆ ಅಮಾಯಕರಿಗೆ  ಶಿಕ್ಷೆ ಆಗಬಾರದು ಎಂಬುದೇ ನನ್ನ ಉದ್ದೇಶವಾಗಿದೆ. ಗೃಹ ಸಚಿವ ಪರಮೇಶ್ವರ್ ಅವರೂ ಕೂಡಾ ತಳಮಟ್ಟದಿಂದ ಬಂದವರು. ಅವರು ಕೂಡಾ ಅರ್ಥ ಮಾಡಿಕೊಂಡು ಈ ಪತ್ರದ ಬಗ್ಗೆ ಕ್ರಮ ತೆಗದುಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ಹೇಳಿದರು. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more