ರಾಜ್ಯಾದ್ಯಂತ ನಾಗರಪಂಚಮಿ ಸಗಡರ: ಈ ಹಬ್ಬದ ಮಹತ್ವ ಏನು ಗೊತ್ತಾ?

ರಾಜ್ಯಾದ್ಯಂತ ನಾಗರಪಂಚಮಿ ಸಗಡರ: ಈ ಹಬ್ಬದ ಮಹತ್ವ ಏನು ಗೊತ್ತಾ?

Published : Aug 21, 2023, 10:22 AM IST

ನಾಗರ ಪಂಚಮಿ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಈ ದಿನ ನಾಗದೇವತೆಯನ್ನು ಪೂಜಿಸಲಾಗುತ್ತದೆ.
 

ನಾಗರ ಪಂಚಮಿಯ ದಿನದಂದು ನಾಗ ದೇವರನ್ನು ಪೂಜಿಸುವುದರಿಂದ ಕಾಳಸರ್ಪ ದೋಷಗಳಿಂದ ಮುಕ್ತಿ ದೊರೆಯುತ್ತದೆ. ಸರ್ಪ ದೇವರನ್ನು ಮನೆಯ ರಕ್ಷಕ ಎಂದೂ ಪರಿಗಣಿಸಲಾಗುತ್ತದೆ. ಈ ದಿನ ನಾಗ ದೇವರನ್ನು ಪೂಜಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೇ ನಾಗರ ಪಂಚಮಿಯಂದು(Nagara Panchami) ಪೂಜೆ ಮಾಡುವುದರಿಂದ ಜಾತಕದಲ್ಲಿ ಕಾಳ ಸರ್ಪದೋಷದ ಪ್ರಭಾವವೂ ಕಡಿಮೆಯಾಗುತ್ತದೆ. ನಾಗರ ಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ(Temple) ಹಾಗೂ ಹುತ್ತಗಳಿರುವ ಜಾಗಕ್ಕೆ ಹೋಗಿ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ. ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಸಹ ಇದೆ. ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ಈ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ ಹೊಂದಿದನು. ಆಗ ಸಹೋದರನ ಸಾವಿನಿಂದ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಅದಕ್ಕೆ ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಅದಕ್ಕೆ ಆ ದಿನ ಮಹಿಳೆಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. 

ಇದನ್ನೂ ವೀಕ್ಷಿಸಿ:  ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more