ಕೋವಿಡ್ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು.
ಬೆಂಗಳೂರು (ಜು. 30): ಕೋವಿಡ್ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು.
ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ನಗರದ ಕೋರಮಂಗಲ ಕ್ಲಬ್ನಲ್ಲಿ ಆಯೋಜಿಸಿದ್ದ ‘ನಮ್ಮ ಆರೋಗ್ಯ ಯೋಧರು’ ಸಮಾರಂಭದಲ್ಲಿ ಕೊರೋನಾ ಸಂದರ್ಭದಲ್ಲಿ ಶ್ರಮಿಸಿದ ಆರೋಗ್ಯ ಕಾರ್ಯಕರ್ತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು.
'ಯಾವುದಾದರೂ ಒಂದು ಘಟನೆ ನಡೆಯುತ್ತಿರುವಾಗ ನಾವು ಅದರಲ್ಲಿ ಭಾಗಿಯಾಗುತ್ತೇವೆ. ಬಳಿಕ ಅದನ್ನು ಮರೆತು ಹೋಗುತ್ತೇವೆ. ಆದರೆ ನಮ್ಮ ಬೆಂಗಳೂರು ಪ್ರತಿಷ್ಠಾನವು ಹಿಂದೆ ಕೋವಿಡ್ ಸಂಕಷ್ಟದಲ್ಲಿ ಶ್ರಮಿಸಿದವರಿಗೆ ಇಂದು ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳಲು ಪ್ರತಿಷ್ಠಾನ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದಕ್ಕೆ ಕಾರಣಕರ್ತರಾದ ಪ್ರತಿಷ್ಠಾನದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಮತ್ತು ಅವರ ತಂಡಕ್ಕೆ ನನ್ನ ಅಭಿನಂದನೆಗಳು' ಎಂದು ಶ್ಲಾಘಿಸಿದರು.