ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?

ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?

Published : Jun 08, 2023, 09:32 AM IST

ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. 

ಬೆಂಗಳೂರು (ಜೂ.08): ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. ಇದೀಗ ಮತ್ತೆ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಲು ಒಕ್ಕೂಟಗಳು ನಷ್ಟದ ಕಾರಣ ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸೋಕೆ ಮುಂದಾಗಿದ್ದವು. ಆದ್ರೆ ಇದಕ್ಕೆ ವಿರೋಧ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ ಧನ ಕಡಿತ ಮಾಡದಂತೆ ಸೂಚನೆ ನೀಡಿದ್ದರು. 

ಹೀಗಾಗಿ ಕಡಿತಗೊಳಿಸಿದ ದರವನ್ನು ಮತ್ತೆ ರೈತರಿಗೆ ನೀಡಲು ಒಕ್ಕೂಟಗಳು ಮುಂದಾಗಿವೆ. ಆದರೆ ಸರ್ಕಾರದ ಮುಂದೆ ಈಗ ದರ ಏರಿಕೆಯ ಪ್ರಸ್ತಾವನೆ ಇಡಲು ತಯಾರಾಗಿದೆ. ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರದ ಮೇಲೆ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ತಿಳಿಸಿದ್ದಾರೆ. ಬಮೂಲ್​ಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪೂರೈಕೆ ಆಗುವ ಹಾಲಿನ ಪ್ರಮಾಣ ಕಡಿಮೆ ಆಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more