National Flag Row : ವಿಧಾನಪರಿಷತ್ ನಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ

National Flag Row : ವಿಧಾನಪರಿಷತ್ ನಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ

Suvarna News   | Asianet News
Published : Feb 17, 2022, 08:30 PM ISTUpdated : Feb 17, 2022, 08:31 PM IST

ಸದನದಲ್ಲಿ ಮುಂದುವರಿದ ಧ್ವಜ ಕದನ
ವಿಧಾನಪರಿಷತ್ ನಲ್ಲಿ ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ
ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಪಟ್ಟು

ಬೆಂಗಳೂರು (ಫೆ.17): ರಾಷ್ಟ್ರಧ್ವಜದ (National Flag) ವಿಚಾರದಲ್ಲಿ ಕೆಎಸ್ ಈಶ್ವರಪ್ಪ (KS Eshwarappa)ನೀಡಿರುವ ಹೇಳಿಕೆ ಉಭಯ ಸದನಗಳಲ್ಲೂ ಕೋಲಾಹಲಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳ ನಾಯಕರು ತಮ್ಮ ತಮ್ಮ ಹೇಳಿಕೆ ನೀಡುತ್ತಿರುವ ಹಂತದಲ್ಲಿ ವಿಧಾನಪರಿಷತ್ ನಲ್ಲಿ ( Legislative Council ) ಕಾಂಗ್ರೆಸ್ (Cogress) ಪಕ್ಷದ ಪ್ರತಿಭಟನೆ ಮುಂದುವರಿದಿದೆ.

ಈ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, "ನಿಮ್ಮ ಪರಿಸ್ಥಿತಿ ನಮಗೆ ಅರ್ಥವಾಗುತ್ತದೆ. ಹಿಜಾಬ್ ವಿಚಾರದಲ್ಲಿ ನಿಮ್ಮ ಪಕ್ಷ ಸಂಪೂರ್ಣವಾಗಿ ಹೈರಾಣಾಗಿದೆ. ಹಾಗಾಗಿ ಈ ರೀತಿಯಲ್ಲಿ ಪ್ರತಿಭಟನೆ ಮಾಡುವ ಮೂಲಕ ಜನರ ಗಮನಸೆಳೆಯುವ ಪ್ರಯತ್ನ ಮಾಡುತ್ತಿದ್ದೀರಿ' ಎಂದು ಹೇಳಿದ್ದಾರೆ. ಇನ್ನು ಅರಗ ಜ್ಞಾನೇಂದ್ರ ಮಾತಿಗೆ ಪರಿಷತ್ ನಲ್ಲಿ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರಿಂದಾಗಿ ಪರಿಷತ್ ನಲ್ಲಿ ತೀವ್ರ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.

Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು
ಇನ್ನು ಕಾಂಗ್ರೆಸ್ ಪಕ್ಷ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದೆ. ಕಾಂಗ್ರೆಸ್ ನವರು ಎಷ್ಟು ಬೇಕಾದರೂ ಗಲಾಟೆ ಮಾಡಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ರಾಷ್ಟ್ರಧ್ವಜಕ್ಕೆ ನಿನ್ನೆ ಸದನದಲ್ಲಿ ಅಪಮಾನ ಮಾಡಿದವರು ಮೊದಲು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ, ನಾನೇಕೆ ರಾಜೀನಾಮೆ ನೀಡಬೇಕು ಎಂದು ಕೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more