ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?

Published : Dec 09, 2024, 08:05 PM IST

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಔಷಧಿ ಖರೀದಿ, ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಸೇರಿದಂತೆ ಹಲವು ಅಂಶಗಳ ಬಗ್ಗೆ ತನಿಖೆ ನಡೆಸಲಿದೆ.

ಬಳ್ಳಾರಿ (ಡಿ.09): ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಉನ್ನತ ತಜ್ಞರ  ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಸಮಿತಿಯು ಐದು ದಿನಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ಈ ಕುರಿತು ಆರೋಗ್ಯ ‌ಮತ್ತು‌ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ನದೀಮ್ ಅಹ್ಮದ್ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ‌ಸಮಿತಿ ರಚಿಸಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಕನಗವಲ್ಲಿ, ಔಷಧಿ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ, ವೈದ್ಯಕೀಯ ಕಾಲೇಜಿನ ಮೈಕ್ರೋಬಯೋಲಜಿಸ್ಟ್ ಡಾ. ಆಸೀಮಾ ಬಾನು, ರಾಜೀವ್ ಗಾಂಧಿ ವಿವಿಯ  ಹಿರಿಯ ಫಾರ್ಮಾಕಾಲಜಿ ಪ್ರಾಧ್ಯಾಪಕ ತಂಡ ತ‌ನಿಖೆ ನಡೆಸಲಿದೆ.

ಈ ಅಂಶಗಳ ಮೇಲೆ ತನಿಖೆ:
ಟೆಂಡ‌ರ್ ಮೂಲಕ ಔಷಧಿಗಳ ಖರೀದಿ ಮತ್ತು ಲ್ಯಾಬ್ ಗಳಿಗೆ ಔಷಧಿ ಮಾದರಿ ನೀಡುವಲ್ಲಿ  ನಿಯಮ ಉಲ್ಲಂಘನಯಾಗಿದೆಯಾ..?
ಘಟನೆಯಲ್ಲಿ ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪ ಆಗಿದೆಯೇ?
ಅಧಿಕಾರಿಗಳ ಮೇಲೆ ಜವಾಬ್ದಾರಿ  ನಿಗದಿ ಮಾಡುವ ಬಗ್ಗೆ ಎಲ್ಲಿ ಲೋಪವಾಗಿದೆ?
ಕೆಎಸ್‌ಎಂಎಸ್‌ಸಿಎಲ್ ನಲ್ಲಿ ಅಸ್ತಿತ್ವದಲ್ಲಿರುವ ಕಾರ್ಯ ವಿಧಾನಗಳು ಸೇರಿದಂತೆ ಇತ್ಯಾದಿ ಅಂಶಗಳ ಬಗ್ಗೆ ಪರಿಶೀಲಿಸಿ ವರದಿ‌ ನೀಡುವಂತೆ ಆದೇಶಿಸಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!