ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?

Published : Dec 09, 2024, 08:05 PM IST

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಔಷಧಿ ಖರೀದಿ, ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಸೇರಿದಂತೆ ಹಲವು ಅಂಶಗಳ ಬಗ್ಗೆ ತನಿಖೆ ನಡೆಸಲಿದೆ.

ಬಳ್ಳಾರಿ (ಡಿ.09): ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಉನ್ನತ ತಜ್ಞರ  ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಸಮಿತಿಯು ಐದು ದಿನಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ಈ ಕುರಿತು ಆರೋಗ್ಯ ‌ಮತ್ತು‌ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ನದೀಮ್ ಅಹ್ಮದ್ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ‌ಸಮಿತಿ ರಚಿಸಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಕನಗವಲ್ಲಿ, ಔಷಧಿ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ, ವೈದ್ಯಕೀಯ ಕಾಲೇಜಿನ ಮೈಕ್ರೋಬಯೋಲಜಿಸ್ಟ್ ಡಾ. ಆಸೀಮಾ ಬಾನು, ರಾಜೀವ್ ಗಾಂಧಿ ವಿವಿಯ  ಹಿರಿಯ ಫಾರ್ಮಾಕಾಲಜಿ ಪ್ರಾಧ್ಯಾಪಕ ತಂಡ ತ‌ನಿಖೆ ನಡೆಸಲಿದೆ.

ಈ ಅಂಶಗಳ ಮೇಲೆ ತನಿಖೆ:
ಟೆಂಡ‌ರ್ ಮೂಲಕ ಔಷಧಿಗಳ ಖರೀದಿ ಮತ್ತು ಲ್ಯಾಬ್ ಗಳಿಗೆ ಔಷಧಿ ಮಾದರಿ ನೀಡುವಲ್ಲಿ  ನಿಯಮ ಉಲ್ಲಂಘನಯಾಗಿದೆಯಾ..?
ಘಟನೆಯಲ್ಲಿ ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪ ಆಗಿದೆಯೇ?
ಅಧಿಕಾರಿಗಳ ಮೇಲೆ ಜವಾಬ್ದಾರಿ  ನಿಗದಿ ಮಾಡುವ ಬಗ್ಗೆ ಎಲ್ಲಿ ಲೋಪವಾಗಿದೆ?
ಕೆಎಸ್‌ಎಂಎಸ್‌ಸಿಎಲ್ ನಲ್ಲಿ ಅಸ್ತಿತ್ವದಲ್ಲಿರುವ ಕಾರ್ಯ ವಿಧಾನಗಳು ಸೇರಿದಂತೆ ಇತ್ಯಾದಿ ಅಂಶಗಳ ಬಗ್ಗೆ ಪರಿಶೀಲಿಸಿ ವರದಿ‌ ನೀಡುವಂತೆ ಆದೇಶಿಸಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!