ಮೀಸಲಾತಿ ಘೋಷಣೆ ನಂತರ ಯುದ್ಧೋತ್ಸಾಹದಲ್ಲಿ ಬಿಜೆಪಿ..!

ಮೀಸಲಾತಿ ಘೋಷಣೆ ನಂತರ ಯುದ್ಧೋತ್ಸಾಹದಲ್ಲಿ ಬಿಜೆಪಿ..!

Published : Oct 12, 2022, 10:46 PM IST

ಎಸ್‌ಸಿ-ಎಸ್‌ಟಿಗೆ ಮೀಸಲಾತಿ ಘೋಷಣೆ ಮಾಡಿದ ಬಳಿಕ, ಚುನಾವಣಾ ರಣಕಣದಲ್ಲಿ ಬಿಜೆಪಿ ಯುದ್ಧೋತ್ಸಾಹದಲ್ಲಿ ಮುಂದುವರಿದಿದೆ. ಜನಸಂಕಲ್ಪ ಯಾತ್ರೆಯ 2ನೇ ದಿನ ಹೊಸಕೋಟೆ ಹಾಗೂ ಕುಷ್ಟಗಿಯಲ್ಲಿ ಕಳೆದ ಮಾಜಿ ಸಿಎಂ ಬಿಎಸ್‌ವೈ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ದಲಿತ ಕೇರಿಯಲ್ಲಿ ಮಿಂಚಿನ ಸಂಚಾರ ನಡೆಸಿದರು.
 

ಬೆಂಗಳೂರು (ಅ.12): ಎಸ್‌ಸಿ-ಎಸ್‌ಟಿ ಮೀಸಲಾತಿ ಘೋಷಣೆ ಮಾಡಿದ ಬಳಿಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಜನಸಂಕಲ್ಪ ಯಾತ್ರೆಯನ್ನು ಬಿಜೆಪಿ ಆರಂಭಿಸಿದೆ. 2ನೇ ದಿನವಾದ ಬುಧವಾರ ಹೊಸಪೇಟೆ, ಕುಷ್ಟಗಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿದರು. ಅಲ್ಲಿಯೇ ಉಪಹಾರವನ್ನೂ ಸೇವಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹೈಕಮಾಂಡ್ ಟಾಸ್ಕ್‌ ನೀಡಿದ್ದು,  ಕೇಂದ್ರದ ಮಾದರಿ ರಾಜ್ಯದಲ್ಲೂ ಬಿಜೆಪಿ ಹೈಕಮಾಂಡ್‌ ಜಾರಿಗೆ ತಂದಿದೆ. ರಾಜ್ಯದ 50 ಕ್ಷೇತ್ರಗಳಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಯಾತ್ರೆ ನಡೆಸಲಿದೆ. ಕಳೆದ ಸಲ ಸೋತ ಕ್ಷೇತ್ರಗಳಲ್ಲೇ ಈ ಬಾರಿ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಖಚಿತ: ಯಡಿಯೂರಪ್ಪ

2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಕೆಲವು ಕಡೆ ಕಳಪೆ ಸಾಧನೆ. ಕೆಲವೆಡೆ ಹಾಲಿ ಬಿಜೆಪಿ ಶಾಸಕರಿದ್ದರೂ ಸೋಲಿನ ಭೀತಿಯೂ ಇದೆ. ಕೆಲವು ಜಿಲ್ಲೆಗಳಲ್ಲಿ ಬಿಜೆಪಿ ಎದುರಾಳಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಇನ್ನೂ ಕೆಲವೆಡೆ ಬಿಜೆಪಿ & ಕಾಂಗ್ರೆಸ್ ನಾಯಕರ ಮಧ್ಯೆ ಸಮಬಲವಿದೆ ಇಂಥ ಪ್ರದೇಶಗಳನ್ನು ನೋಡಿಕೊಂಡು ಬಿಜೆಪಿ ಮತ ಸಂಘಟನೆ ಮಾಡಲಿದೆ,

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more