News Hour ನಾನ್ಯಾಕೆ ರಾಜೀನಾಮೆ ಕೊಡ್ಲಿ ಎಂದ ಈಶ್ವರಪ್ಪ, ಪಟ್ಟು ಬಿಡದ ಕಾಂಗ್ರೆಸ್!

News Hour ನಾನ್ಯಾಕೆ ರಾಜೀನಾಮೆ ಕೊಡ್ಲಿ ಎಂದ ಈಶ್ವರಪ್ಪ, ಪಟ್ಟು ಬಿಡದ ಕಾಂಗ್ರೆಸ್!

Published : Apr 13, 2022, 11:52 PM ISTUpdated : Apr 13, 2022, 11:53 PM IST

ಬುಧವಾರ ಇಡೀ ದಿನ ರಾಜ್ಯ ರಾಜಕಾರಣದಲ್ಲಿ ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ, ಅದಕ್ಕಾಗಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ವಿಚಾರಗಳೇ ಸುದ್ದಿಯಾದವು. ಈಶ್ವರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದರೆ, ಕಾಂಗ್ರೆಸ್ ಮಾತ್ರ ರಾಜೀನಾಮೆಗಾಗಿ ಪಟ್ಟು ಹಿಡಿದು ಕುಳಿತಿದೆ.
 

ಬೆಂಗಳೂರು (ಏ.13): ತಮ್ಮ ಮೇಲಿನ 40% ಕಮೀಷನ್ ಆರೋಪದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಊಹಾಪೋಹಗಳ ನಡುವೆಯೇ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ನಾನ್ಯಾಕೆ ರಾಜೀನಾಮೆ ನೀಡಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನೊಂದೆಡೆ ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ (Contractor Santosh Patil) ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ (Congress)ಒತ್ತಾಯ ಮಾಡಿದೆ. ಅದರಂತೆ ಇಂದು ದೆಹಲಿ ಹಾಗೂ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ದೊಡ್ಡ ಮಟ್ಟದ ಪ್ರತಿಭಟನೆಯಾಗಿದ್ದು, ಈಶ್ವರಪ್ಪ ಅವರ ಮನೆಯ ಮುಂದೆ ಅಹೋರಾತ್ರಿ ಧರಣಿ ಮಾಡುವುದಾಗಿ ಕಾಂಗ್ರೆಸ್ ಹೇಳಿದೆ.

Suicide Case: ಈಶ್ವರಪ್ಪ ಅಂಥವರಲ್ಲ.. ಅಂಥವರಲ್ಲ..: ಮಖಣಾಪೂರ ಸ್ವಾಮೀಜಿ

ಇನ್ನೊಂದೆಡೆ, ಕಾಂಗ್ರೆಸ್ ಮುಖಂಡರೆಲ್ಲ ಬೆಳಗಾವಿಗೆ ತೆರಳಿ ಸಂತೋಷ್ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಪಕ್ಷದ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಲಾಗಿದೆ.  ಈ ನಡಯವೆ ಕಮೀಷನ್ ವಿಚಾರದಲ್ಲಿ ಸಿಲುಕಿಕೊಂಡಿರುವ ಸಚಿವ ಕೆಎಸ್ ಈಶ್ವರಪ್ಪ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಅವಸರ ತೋರುತ್ತಿಲ್ಲ. ಹಾಗೇನಾದರೂ ರಾಜೀನಾಮೆ ಪಡೆದಲ್ಲಿ ಈಶ್ವರಪ್ಪ ಮೇಲಿನ ಭ್ರಷ್ಟಾಚಾರವನ್ನು ಒಪ್ಪಿಕೊಂಡಂತಾಗಲಿದೆ ಎನ್ನುವ ಎಚ್ಚರಿಕೆಯನ್ನು ಹೈಕಮಾಂಡ್ ತೋರಿದೆ. ಆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ವೇಳೆಗೆ ದೊಡ್ಡ ಅಸ್ತ್ರ ಸಿಕ್ಕಂತಾಗಲಿದೆ ಎನ್ನುವ ಅಭಿಪ್ರಾಯ ಹೊಂದಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more