News Hour ಈಶ್ವರಪ್ಪ ತಲೆದಂಡ, ಬರೀ ರಾಜೀನಾಮೆ ಅಲ್ಲ ಅರೆಸ್ಟ್ ಮಾಡಬೇಕು ಎಂದ ಕಾಂಗ್ರೆಸ್!

News Hour ಈಶ್ವರಪ್ಪ ತಲೆದಂಡ, ಬರೀ ರಾಜೀನಾಮೆ ಅಲ್ಲ ಅರೆಸ್ಟ್ ಮಾಡಬೇಕು ಎಂದ ಕಾಂಗ್ರೆಸ್!

Published : Apr 14, 2022, 11:51 PM IST

ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದ ಮೊದಲ ವಿಕೆಟ್ ಅನ್ನು ಪಡೆದಿದೆ. ರಾಜೀನಾಮೆ ಕೊಡೋದೇ ಇಲ್ಲ ಎಂದು ಹೇಳಿದ್ದ ಈಶ್ವರಪ್ಪ ತಮ್ಮ ನಿರ್ಧಾರವನ್ನು ಬದಲಿಸಲು ಸಾಕಷ್ಟು ವಿಚಾರಗಳು ಕಾರಣವಾಗಿದೆ.
 

ಬೆಂಗಳೂರು (ಏ. 14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (contractor Santosh Patil Suicide ) ಮತ್ತು ಅದರ ಬೆನ್ನಿಗೆ ಎದ್ದ 40% ಕಮೀಷನ್ ವಿಚಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ (K S Eshwarappa)ಅವರ ತಲೆದಂಡವಾಗಿದೆ. ಗುರುವಾರ ಸುದ್ದಿಗೋಷ್ಠಿ ನಡೆಸಿದ ಕೆಎಸ್ ಈಶ್ವರಪ್ಪ, ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು.

ಒಂದೆಡೆ ಕಾಂಗ್ರೆಸ್ (Congress) ಪಕ್ಷ, ಈಶ್ವರಪ್ಪ ಅವರು ರಾಜೀನಾಮೆ ನೀಡಲೇಬೇಕು ಎಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದರೆ, ಗುರುವಾರ ಬೆಳಗ್ಗೆಯಿಂದಲೇ ಈಶ್ವರಪ್ಪ ಅವರನ್ನು ಸಮರ್ಥಿಸಿಕೊಂಡು ಬಿಜೆಪಿಯ ಹಿರಿಯ ನಾಯಕರು ಹಾಗೂ ಸ್ವತಃ ಮುಖ್ಯಮಂತ್ರಿಗಳೇ ಮಾತನಾಡಿದ್ದರು. ಆದರೆ, ಹೈಕಮಾಂಡ್ ಈಶ್ವರಪ್ಪನವರ ರಾಜೀನಾಮೆ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ ಬೆನ್ನಲ್ಲಿಯೇ, ಹಿರಿಯ ನಾಯಕ ಸುದ್ದಿಗೋಷ್ಠಿ ನಡೆಸಿ ಶುಕ್ರವಾರ ಮಂತ್ರಿ ಪದವಿಗೆ ರಾಜೀನಾಮೆ ನೀಡುವುದಾಗಿ ಹೇಳಿದರು.

ಈಶ್ವರಪ್ಪ ಮಾತಿಗೆ ನಿಂತ್ರೆ ಬ್ರೇಕ್‌ ಫೇಲ್‌: ವಿವಾದಗಳ ಸರದಾರ ಈ ಸಕಲವಿವಾದವಲ್ಲಭ..

ಇಂದು ಸ್ವತಃ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಹಾಗೂ ಎಂಬಿ ಪಾಟೀಲ್ ನೇತೃತ್ವದ ಕಾಂಗ್ರೆಸ್ ಘಟಾನುಘಟಿ ನಾಯಕರು ಮುಖ್ಯಮಂತ್ರಿಯ ಮನೆಯ ಮುಂದೆ ಧರಣಿ ನಡೆಸಿದ್ದಲ್ಲದೆ, ಬಂಧನಕ್ಕೂ ಒಳಗಾದರು. ಈಶ್ವರಪ್ಪ ರಾಜೀನಾಮೆ ನೀಡದೇ ಹೋದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಣೆ ಮಾಡಿದ್ದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more