News Hour ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ!

News Hour ಹಿಜಾಬ್ ನಂತ್ರ ಈಗ ಭಗವದ್ಗೀತೆ ಕಿಚ್ಚು, ಕಾಶ್ಮೀರ ಫೈಲ್ಸ್ ಕಟ್ಟುಕಥೆಯಂತೆ!

Published : Mar 18, 2022, 11:39 PM IST

ಕರ್ನಾಟಕ ಶಾಲೆಗಳಲ್ಲಿ ಭಗವದ್ಗೀತೆ ಅಧ್ಯಯನ

ಬಜೆಟ್ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ವ್ಯಾಕ್ಸಿನ್ ವಾರ್

ಕಾಶ್ಮೀರ ಫೈಲ್ಸ್ ಕಟ್ಟುಕಥೆ ಎಂದು ಹೇಳಿದ ಕಾಂಗ್ರೆಸ್

ಬೆಂಗಳೂರು (ಮಾ.18): ಗುಜರಾತ್ (Gujrat) ಬಳಿಕ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆಯನ್ನು ಸೇರಿಸುವ ಬಗ್ಗೆ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ದಿ ಕಾಶ್ಮೀರ ಫೈಲ್ಸ್ (The Kashmir Files) ಹಾಗೂ ಹಿಜಾಬ್ (Hijab) ವಿಚಾರಗಳು ತಣ್ಣಗಾದ ಬೆನ್ನಲ್ಲಿಯೇ ರಾಜ್ಯದಲ್ಲಿ ಭಗವದ್ಗೀತೆ ವಿಚಾರ ಕಿಚ್ಚೆಬ್ಬಿಸಿದೆ.  ಶಾಲಾ ಪಠ್ಯಕ್ರಮದಲ್ಲಿ ಗುಜರಾತ್ ಮಾದರಿಯಂತೆ ಭಗವದ್ಗೀತೆಯನ್ನು(Bhagavad Gita) ಅಳವಳಡಿಸಬೇಕು ಎನ್ನುವ ಅಭಿಪ್ರಾಯಕ್ಕೆ ರಾಜ್ಯಾದ್ಯಂತ ನಾಯಕರಿಂದ ಹಲವು ಬಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

ಕರ್ನಾಟಕ ರಾಜಕಾರಣದಲ್ಲಿ ಕಿಚ್ಚು ಎಬ್ಬಿಸಿರುವ ಭಗವದ್ಗೀತೆ ವಿಚಾರ, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. ಗುಜರಾತ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷವೂ ಇದಕ್ಕೆ ಬೆಂಬಲ ನೀಡಿದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಯಾವುದರ ಪರವಾಗಿ ನಿಲ್ಲಬೇಕು ಅನ್ನೋ ವಿಚಾರದಲ್ಲಿಯೇ ಗೊಂದಲದಲ್ಲಿದೆ.

News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ
ಇನ್ನು ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಯುದ್ಧ ನಡೆಯಿತು. ಕೊರೋನಾವೈರಸ್ ಲಸಿಕೆಯ ವಿಚಾರವಾಗಿ ಆರಂಭವಾದ ಮಾತಿನ ಪ್ರಹಾರ, ಕೊನೆಗೆ ಎಲ್ಲೆಲ್ಲಿಗೋ ಹೋಗಿ ತಲುಪಿ, ವಿಧಾನಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಯಿತು. ಮತ್ತೊಂದೆಡೆ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡದಲ್ಲಿ ಸ್ವಂತ ಖರ್ಚಿನಲ್ಲಿ ಡಬ್ಬಿಂಗ್ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಆ ಮೂಲಕ ರಾಜ್ಯದಲ್ಲಿ ಕನ್ನಡಿಗರ ಪ್ರತಿ ಮನೆನೆಗೂ ಈ ಚಿತ್ರವನ್ನು ತಲುಪಿಸುವ ಕೆಲಸವನ್ನು ಮಾಡಲು ತಯಾರಿ ನಡೆಸಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more