News Hour  ಹಲಾಲ್ ವಾರ್ ನಡುವೆ ಗಂಡಸ್ತನದ ಗಲಾಟೆ, "ಹಿಂದೂ ಎನ್ನುವ ಶಬ್ದವೇ ಅಪಾಯ" ಎಂದ ಸಾಹಿತಿ ಕುಂವೀ!

News Hour ಹಲಾಲ್ ವಾರ್ ನಡುವೆ ಗಂಡಸ್ತನದ ಗಲಾಟೆ, "ಹಿಂದೂ ಎನ್ನುವ ಶಬ್ದವೇ ಅಪಾಯ" ಎಂದ ಸಾಹಿತಿ ಕುಂವೀ!

Published : Mar 31, 2022, 11:16 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸ್ತನದ ಸವಾಲನ್ ಹಾಕಿದ ಎಚ್ ಡಿಕೆ
ಜಿಲ್ಲೆಜಿಲ್ಲೆಗಳಲ್ಲೂ ಹಬ್ಬಿದ ಹಲಾಲ್ ವರ್ಸಸ್ ಜಟ್ಕಾ ಹೋರಾಟ
ಹಿಂದು ಸಂಘಟನೆಗಳ ಪರ ನಿಂತ ಪೇಜಾವರ ಶ್ರೀ
ಹಿಂದುಗಳ ಕುರಿತಾಗಿ ಕುಂ.ವೀರಭದ್ರಪ್ಪ ವಿವಾದಿತ ಹೇಳಿಕೆ
 

ಬೆಂಗಳೂರು (ಮಾ. 31): ರಾಜ್ಯದಲ್ಲಿ ವಿವಾದದ ರೂಪ ತಾಳಿರುವ ಹಲಾಲ್ (Halal) ಹಾಗೂ ವ್ಯಾಪಾರ ವಾರ್ (Trade) ವಿಚಾರದ ಬಗ್ಗೆ ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಗುರುವಾರ ಕೆಂಡಾಮಂಡಲರಾದರು. ಮಾತನಾಡುವ ಭರದಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಗಂಡಸ್ತನ ಪ್ರಶ್ನೆ ಮಾಡಿದ್ದು ಸುದ್ದಿಯಾಗುತ್ತಿದ್ದಂತೆ ತಮ್ಮ ಮಾತಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಇನ್ನೊಂದೆಡೆ ಹಲಾಲ್ ಹಾಗೂ ಜಟ್ಕಾ ಕುರಿತಾಗಿ ಕರಪತ್ರ ಹಂಚುವ ಅಭಿಯಾನ ಜಿಲ್ಲೆಜಿಲ್ಲೆಗಳಿಗೆ ಮುಟ್ಟಿದೆ. ಬೆಂಗಳೂರಿನ ಬಹುತೇಕ ಅಂಗಡಿಗಳಲ್ಲಿ ಹಲಾಲ್ ಬೋರ್ಡ್ ಗಳನ್ನು ತೆಗೆದುಹಾಕಲಾಗಿದೆ.  ರಾಜ್ಯದಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿ ಉಡುಪಿಯ ಪೇಜಾವರ ಶ್ರೀ ಗಳನ್ನು ಮುಸ್ಲಿಂ ವ್ಯಾಪಾರಿಗಳ ಗುಂಪು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಪೇಜಾವರ ಶ್ರೀಗಳು, "ಸಾಮರಸ್ಯ ಅನ್ನೋದು ಎರಡೂ ಕಡೆಯಿಂದ ಬರಬೇಕು. ಯಾರಿಂದ ಸಮಸ್ಯೆ ಹುಟ್ಟಿದೆಯೋ ಅವರಿಂದಲೇ ಈ ಸಮಸ್ಯೆ ಬಗೆಹರಿಯಬೇಕು' ಎಂದು ಹೇಳಿದ್ದಾರೆ.
ಪೇಜಾವರ ಶ್ರೀಗಳು ಹಿಂದು ಸಂಘಟನೆಗಳ ಪರವಾಗಿ ನಿಂತ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. "ಯಾವುದು ಹಿಂದೂ ಸಮಾಜ, ಯಾವ ಸಮಾಜಕ್ಕೆ ನೋವಾಗಿದೆ. ಸ್ವಾತಂತ್ರ್ಯಪೂರ್ವದಲ್ಲಿ ಗುಲಾಮಗಿರಿಯಲ್ಲಿ ಇಟ್ಟಿದ್ದೀರಲ್ಲ ಅಂಥಾ ಜನಕ್ಕೆ ನೋವಾಗಿರಬಹುದು' ಎಂದು ಹೇಳಿದ್ದಾರೆ.

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಹಿಂ ಹೇಳಿದ ವಿಧಾನ!

ಈ ನಡುವೆ ಸಾಹಿತಿ ಕುಂ.ವೀರಭದ್ರಪ್ಪ ಹಿಂದುಗಳ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ವಿದ್ಯಮಾನದ ಬಗ್ಗೆ ಮಾತನಾಡುತ್ತಾ, "ದೇಶಕ್ಕೆ ಹಿಂದೂ ಎನ್ನುವ ಶಬ್ದದಿಂದಲೇ ಅಪಾಯವಿದೆ. ಹಿಂದುಗಳು ಬಹುಸಂಖ್ಯಾತರು ಎಂದು ಹೇಳೋದು ಸರಿಯಲ್ಲ. ನಾನು ಹಿಂದು ಅಲ್ಲ, ನಾನು ಭಾರತೀಯ, ಲಿಂಗಾಯತ ಬಸವಣ್ಣನ ಅನುಯಾಯಿ' ಎಂದು ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more