News Hour  ಹಲಾಲ್ ವಾರ್ ನಡುವೆ ಗಂಡಸ್ತನದ ಗಲಾಟೆ, "ಹಿಂದೂ ಎನ್ನುವ ಶಬ್ದವೇ ಅಪಾಯ" ಎಂದ ಸಾಹಿತಿ ಕುಂವೀ!

News Hour ಹಲಾಲ್ ವಾರ್ ನಡುವೆ ಗಂಡಸ್ತನದ ಗಲಾಟೆ, "ಹಿಂದೂ ಎನ್ನುವ ಶಬ್ದವೇ ಅಪಾಯ" ಎಂದ ಸಾಹಿತಿ ಕುಂವೀ!

Published : Mar 31, 2022, 11:16 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸ್ತನದ ಸವಾಲನ್ ಹಾಕಿದ ಎಚ್ ಡಿಕೆ
ಜಿಲ್ಲೆಜಿಲ್ಲೆಗಳಲ್ಲೂ ಹಬ್ಬಿದ ಹಲಾಲ್ ವರ್ಸಸ್ ಜಟ್ಕಾ ಹೋರಾಟ
ಹಿಂದು ಸಂಘಟನೆಗಳ ಪರ ನಿಂತ ಪೇಜಾವರ ಶ್ರೀ
ಹಿಂದುಗಳ ಕುರಿತಾಗಿ ಕುಂ.ವೀರಭದ್ರಪ್ಪ ವಿವಾದಿತ ಹೇಳಿಕೆ
 

ಬೆಂಗಳೂರು (ಮಾ. 31): ರಾಜ್ಯದಲ್ಲಿ ವಿವಾದದ ರೂಪ ತಾಳಿರುವ ಹಲಾಲ್ (Halal) ಹಾಗೂ ವ್ಯಾಪಾರ ವಾರ್ (Trade) ವಿಚಾರದ ಬಗ್ಗೆ ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಗುರುವಾರ ಕೆಂಡಾಮಂಡಲರಾದರು. ಮಾತನಾಡುವ ಭರದಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಗಂಡಸ್ತನ ಪ್ರಶ್ನೆ ಮಾಡಿದ್ದು ಸುದ್ದಿಯಾಗುತ್ತಿದ್ದಂತೆ ತಮ್ಮ ಮಾತಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಇನ್ನೊಂದೆಡೆ ಹಲಾಲ್ ಹಾಗೂ ಜಟ್ಕಾ ಕುರಿತಾಗಿ ಕರಪತ್ರ ಹಂಚುವ ಅಭಿಯಾನ ಜಿಲ್ಲೆಜಿಲ್ಲೆಗಳಿಗೆ ಮುಟ್ಟಿದೆ. ಬೆಂಗಳೂರಿನ ಬಹುತೇಕ ಅಂಗಡಿಗಳಲ್ಲಿ ಹಲಾಲ್ ಬೋರ್ಡ್ ಗಳನ್ನು ತೆಗೆದುಹಾಕಲಾಗಿದೆ.  ರಾಜ್ಯದಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿ ಉಡುಪಿಯ ಪೇಜಾವರ ಶ್ರೀ ಗಳನ್ನು ಮುಸ್ಲಿಂ ವ್ಯಾಪಾರಿಗಳ ಗುಂಪು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಪೇಜಾವರ ಶ್ರೀಗಳು, "ಸಾಮರಸ್ಯ ಅನ್ನೋದು ಎರಡೂ ಕಡೆಯಿಂದ ಬರಬೇಕು. ಯಾರಿಂದ ಸಮಸ್ಯೆ ಹುಟ್ಟಿದೆಯೋ ಅವರಿಂದಲೇ ಈ ಸಮಸ್ಯೆ ಬಗೆಹರಿಯಬೇಕು' ಎಂದು ಹೇಳಿದ್ದಾರೆ.
ಪೇಜಾವರ ಶ್ರೀಗಳು ಹಿಂದು ಸಂಘಟನೆಗಳ ಪರವಾಗಿ ನಿಂತ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. "ಯಾವುದು ಹಿಂದೂ ಸಮಾಜ, ಯಾವ ಸಮಾಜಕ್ಕೆ ನೋವಾಗಿದೆ. ಸ್ವಾತಂತ್ರ್ಯಪೂರ್ವದಲ್ಲಿ ಗುಲಾಮಗಿರಿಯಲ್ಲಿ ಇಟ್ಟಿದ್ದೀರಲ್ಲ ಅಂಥಾ ಜನಕ್ಕೆ ನೋವಾಗಿರಬಹುದು' ಎಂದು ಹೇಳಿದ್ದಾರೆ.

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಹಿಂ ಹೇಳಿದ ವಿಧಾನ!

ಈ ನಡುವೆ ಸಾಹಿತಿ ಕುಂ.ವೀರಭದ್ರಪ್ಪ ಹಿಂದುಗಳ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ವಿದ್ಯಮಾನದ ಬಗ್ಗೆ ಮಾತನಾಡುತ್ತಾ, "ದೇಶಕ್ಕೆ ಹಿಂದೂ ಎನ್ನುವ ಶಬ್ದದಿಂದಲೇ ಅಪಾಯವಿದೆ. ಹಿಂದುಗಳು ಬಹುಸಂಖ್ಯಾತರು ಎಂದು ಹೇಳೋದು ಸರಿಯಲ್ಲ. ನಾನು ಹಿಂದು ಅಲ್ಲ, ನಾನು ಭಾರತೀಯ, ಲಿಂಗಾಯತ ಬಸವಣ್ಣನ ಅನುಯಾಯಿ' ಎಂದು ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more