News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್!

News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್!

Published : Apr 08, 2022, 11:57 PM ISTUpdated : Apr 08, 2022, 11:58 PM IST

ಹಿಂದಿ ಭಾಷೆಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ರಾಜ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಸಿದ್ಧರಾಮಯ್ಯ, ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಸಂಪುಟ ಸರ್ಕಸ್ ಇನ್ನೂ ಮುಂದುವರಿದಿದೆ.

ಬೆಂಗಳೂರು (ಏ.8): ಮುಸ್ಕಾನ್ ಖಾನ್ (Muskan Khan) ಕುರಿತಾಗಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಮುಖ್ಯಸ್ಥ ಬರೆದ ಕವನ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದೆ. ಹಿಜಾಬ್ (Hijab) ದಂಗಲ್ ವಿಚಾರದಲ್ಲಿ ಎಲ್ಲರೂ ಬಿಜೆಪಿಗೆ ಹಾಗೂ ಹಿಂದು ಸಂಘಟನೆಗಳಿಗೆ ಬುದ್ಧಿ ಹೇಳಲು ಬರ್ತಿದ್ದಾರೆ. ಆದರೆ, ಇದೇ ವಿಪಕ್ಷಗಳು ವಿದ್ಯಾರ್ಥಿನಿಯರಿಗೆ ಯಾಕೆ ಬುದ್ಧಿ ಹೇಳುವ ಕೆಲಸ ಮಾಡೋದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನೆ ಮಾಡಿದ್ದಾರೆ.

ಇದರ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಇಂಗ್ಲೀಷ್ ಬದಲಿಗೆ ರಾಜ್ಯ ರಾಜ್ಯಗಳ ನಡುವಿನ ನಾಗರೀಕರು ಹೆಚ್ಚಾಗಿ ಹಿಂದಿಯಲ್ಲೇ ವ್ಯವಹರಿಸಲಿ ಎಂದು ಹೇಳಿರುವುದು ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ(siddaramaiah ) , ಇದು ಮಾತೃಭಾಷೆಗಳಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಲ್ಲದೆ, ಈ ಕೂಡಲೇ ಅಮಿತ್ ಶಾ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕು. ಇದು ಘರ್ಷಣೆಗೆ ಎಡೆ ಮಾಡಿಕೊಡುವ ಹೇಳಿದೆ ಎಂದು ಕಿಡಿಕಾರಿದ್ದಾರೆ.

ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

ಇನ್ನೊಂದೆಡೆ, ರಾಜ್ಯದಲ್ಲಿ ಸಂಪುಟ ಸೀಕ್ರೆಟ್ ಮುಂದುವರಿದಿದೆ. ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಿದ್ದಾಗ ಕ್ಯಾಬಿನೆಟ್ ಕುರಿತಾಗಿ ಸ್ಪಷ್ಟ ನಿರ್ಣಯ ತೆಗೆದುಕೊಂಡೇ ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದ್ಯಾವುದು ಆಗಿರಲಿಲ್ಲ. ಒಟ್ಟಾರೆ ರಾಜ್ಯದಲ್ಲಿನ್ನೂ ಸಂಪುಟ ಸರ್ಕಸ್ ಮುಗಿಯುವ ಹಾಗೆ ಕಾಣುತ್ತಿಲ್ಲ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more