News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್!

News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್!

Published : Apr 08, 2022, 11:57 PM ISTUpdated : Apr 08, 2022, 11:58 PM IST

ಹಿಂದಿ ಭಾಷೆಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ರಾಜ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಸಿದ್ಧರಾಮಯ್ಯ, ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಸಂಪುಟ ಸರ್ಕಸ್ ಇನ್ನೂ ಮುಂದುವರಿದಿದೆ.

ಬೆಂಗಳೂರು (ಏ.8): ಮುಸ್ಕಾನ್ ಖಾನ್ (Muskan Khan) ಕುರಿತಾಗಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಮುಖ್ಯಸ್ಥ ಬರೆದ ಕವನ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದೆ. ಹಿಜಾಬ್ (Hijab) ದಂಗಲ್ ವಿಚಾರದಲ್ಲಿ ಎಲ್ಲರೂ ಬಿಜೆಪಿಗೆ ಹಾಗೂ ಹಿಂದು ಸಂಘಟನೆಗಳಿಗೆ ಬುದ್ಧಿ ಹೇಳಲು ಬರ್ತಿದ್ದಾರೆ. ಆದರೆ, ಇದೇ ವಿಪಕ್ಷಗಳು ವಿದ್ಯಾರ್ಥಿನಿಯರಿಗೆ ಯಾಕೆ ಬುದ್ಧಿ ಹೇಳುವ ಕೆಲಸ ಮಾಡೋದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನೆ ಮಾಡಿದ್ದಾರೆ.

ಇದರ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಇಂಗ್ಲೀಷ್ ಬದಲಿಗೆ ರಾಜ್ಯ ರಾಜ್ಯಗಳ ನಡುವಿನ ನಾಗರೀಕರು ಹೆಚ್ಚಾಗಿ ಹಿಂದಿಯಲ್ಲೇ ವ್ಯವಹರಿಸಲಿ ಎಂದು ಹೇಳಿರುವುದು ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ(siddaramaiah ) , ಇದು ಮಾತೃಭಾಷೆಗಳಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಲ್ಲದೆ, ಈ ಕೂಡಲೇ ಅಮಿತ್ ಶಾ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕು. ಇದು ಘರ್ಷಣೆಗೆ ಎಡೆ ಮಾಡಿಕೊಡುವ ಹೇಳಿದೆ ಎಂದು ಕಿಡಿಕಾರಿದ್ದಾರೆ.

ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

ಇನ್ನೊಂದೆಡೆ, ರಾಜ್ಯದಲ್ಲಿ ಸಂಪುಟ ಸೀಕ್ರೆಟ್ ಮುಂದುವರಿದಿದೆ. ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಿದ್ದಾಗ ಕ್ಯಾಬಿನೆಟ್ ಕುರಿತಾಗಿ ಸ್ಪಷ್ಟ ನಿರ್ಣಯ ತೆಗೆದುಕೊಂಡೇ ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದ್ಯಾವುದು ಆಗಿರಲಿಲ್ಲ. ಒಟ್ಟಾರೆ ರಾಜ್ಯದಲ್ಲಿನ್ನೂ ಸಂಪುಟ ಸರ್ಕಸ್ ಮುಗಿಯುವ ಹಾಗೆ ಕಾಣುತ್ತಿಲ್ಲ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more