News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್!

News Hour ಹಿಂದಿ ಪರವಾಗಿ ಅಮಿತ್ ಶಾ ಹೇಳಿಕೆಗೆ ರಾಜ್ಯದಲ್ಲಿ ಆಕ್ರೋಶ, ಮುಗಿಯದ ಹಿಜಾಬ್ ದಂಗಲ್!

Published : Apr 08, 2022, 11:57 PM ISTUpdated : Apr 08, 2022, 11:58 PM IST

ಹಿಂದಿ ಭಾಷೆಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ರಾಜ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಸಿದ್ಧರಾಮಯ್ಯ, ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಸಂಪುಟ ಸರ್ಕಸ್ ಇನ್ನೂ ಮುಂದುವರಿದಿದೆ.

ಬೆಂಗಳೂರು (ಏ.8): ಮುಸ್ಕಾನ್ ಖಾನ್ (Muskan Khan) ಕುರಿತಾಗಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಮುಖ್ಯಸ್ಥ ಬರೆದ ಕವನ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದೆ. ಹಿಜಾಬ್ (Hijab) ದಂಗಲ್ ವಿಚಾರದಲ್ಲಿ ಎಲ್ಲರೂ ಬಿಜೆಪಿಗೆ ಹಾಗೂ ಹಿಂದು ಸಂಘಟನೆಗಳಿಗೆ ಬುದ್ಧಿ ಹೇಳಲು ಬರ್ತಿದ್ದಾರೆ. ಆದರೆ, ಇದೇ ವಿಪಕ್ಷಗಳು ವಿದ್ಯಾರ್ಥಿನಿಯರಿಗೆ ಯಾಕೆ ಬುದ್ಧಿ ಹೇಳುವ ಕೆಲಸ ಮಾಡೋದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನೆ ಮಾಡಿದ್ದಾರೆ.

ಇದರ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಇಂಗ್ಲೀಷ್ ಬದಲಿಗೆ ರಾಜ್ಯ ರಾಜ್ಯಗಳ ನಡುವಿನ ನಾಗರೀಕರು ಹೆಚ್ಚಾಗಿ ಹಿಂದಿಯಲ್ಲೇ ವ್ಯವಹರಿಸಲಿ ಎಂದು ಹೇಳಿರುವುದು ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ(siddaramaiah ) , ಇದು ಮಾತೃಭಾಷೆಗಳಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಲ್ಲದೆ, ಈ ಕೂಡಲೇ ಅಮಿತ್ ಶಾ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕು. ಇದು ಘರ್ಷಣೆಗೆ ಎಡೆ ಮಾಡಿಕೊಡುವ ಹೇಳಿದೆ ಎಂದು ಕಿಡಿಕಾರಿದ್ದಾರೆ.

ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ

ಇನ್ನೊಂದೆಡೆ, ರಾಜ್ಯದಲ್ಲಿ ಸಂಪುಟ ಸೀಕ್ರೆಟ್ ಮುಂದುವರಿದಿದೆ. ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಿದ್ದಾಗ ಕ್ಯಾಬಿನೆಟ್ ಕುರಿತಾಗಿ ಸ್ಪಷ್ಟ ನಿರ್ಣಯ ತೆಗೆದುಕೊಂಡೇ ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದ್ಯಾವುದು ಆಗಿರಲಿಲ್ಲ. ಒಟ್ಟಾರೆ ರಾಜ್ಯದಲ್ಲಿನ್ನೂ ಸಂಪುಟ ಸರ್ಕಸ್ ಮುಗಿಯುವ ಹಾಗೆ ಕಾಣುತ್ತಿಲ್ಲ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more