Sep 7, 2021, 1:17 PM IST
ಮಂಗಳೂರು (ಸೆ. 07): ಕೋವಿಡ್ ಅಲೆ ನಿಯಂತ್ರಿಸಲಾಗದೆ ಹೆಣಗಾಡುತ್ತಿರುವ ಕೇರಳದಲ್ಲಿ ಈಗ ‘ನಿಪಾ ವೈರಸ್’ ಹಾವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಅಲರ್ಟ್ ಘೋಷಿಸಿದೆ ಜಿಲ್ಲಾಡಳಿತ. ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!
ಕೇರಳದಲ್ಲಿ 12 ವರ್ಷದ ಬಾಲಕನೊಬ್ಬ ನಿಪಾ ವೈರಸ್ ಸೋಂಕಿಗೆ ಬಲಿಯಾಗಿದ್ದು, ಆತನಿಗೆ ಚಿಕಿತ್ಸೆ ನೀಡಿದ್ದ ಇಬ್ಬರು ವೈದ್ಯರಿಗೂ ಸೋಂಕು ತಾಗಿದೆ. ಹೀಗಾಗಿ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಸೋಂಕಿಗೀಡಾದ ಬಾವಲಿಗಳು ತಿಂದು ಬಿಟ್ಟಹಣ್ಣನ್ನು ಅನ್ಯ ಪ್ರಾಣಿ ಅಥವಾ ಮನುಷ್ಯರು ಸೇವಿಸಿದಾಗ ನಿಪಾ ವೈರಸ್ ಅಂಟುತ್ತದೆ. ಜೊಲ್ಲು, ಉಗುಳಿನ ಮೂಲಕ ಇತರರಿಗೆ ಹರಡುತ್ತದೆ.