ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

Published : Mar 23, 2022, 04:40 PM IST

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ

ಭಾವನಾತ್ಮಾಕ ವಿಚಾರವನ್ನು ಮುಂದೆ ತರುವ ಹುನ್ನಾರ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು (ಮಾ. 23): ಹಿಂದೂ ಜಾತ್ರೆಗಳಲ್ಲಿ (HIndu Jatre) ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ನಿರ್ಬಂಧ ವಿಧಿಸಿರುವ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( former cm HD Kumaraswamy), ಬಿಜೆಪಿ (BJP) ಸರ್ಕಾರವನ್ನು ಟೀಕಿಸಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಇಂಥ ಗಿಮಿಕ್ ಗಳನ್ನು ಮಾಡಿಕೊಂಡೇ ಅಧಿಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಭಾವನಾತ್ಮಕ ವಿಚಾರವನ್ನು ಮುನ್ನಲೆಗೆ ತಂದು ಗಮನಸೆಳೆಯುವ ಪ್ರಯತ್ನ ಮಾಡಲಿದೆ ಎಂದು ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಮಂಗಳೂರಿನ (Mangaluru) ವಿಚಾರವನ್ನು ಇಡೀ ರಾಜ್ಯವ್ಯಾಪಿ ತರಲು ಸರ್ಕಾರ ಹೊರಟಿದೆ. ಚುನಾವಣೆಯ ಒಳಗೆ ಇನ್ನು ಏನೆಲ್ಲಾ ಮಾಡ್ತಾರೋ ಗೊತ್ತಿಲ್ಲ. ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರವಿದು ಎಂದು ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.

Kapu Marigudi Jatra: ಕಳಚಿದ ಸೌಹಾರ್ದತೆಯ ಕೊಂಡಿ, 2ನೇ ದಿನವು ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
ಬಿಜೆಪಿ ಹಾಗೂ ಅವರ ಸಂಘಟನೆಗಳು ಭಾವನಾತ್ಮಕ ವಿಚಾರವನ್ನು, ಕೋಮು ಸಂಘರ್ಷ ಕೆರಳಿಸುವ ವಿಚಾರಗಳನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ರಾಜ್ಯದಲ್ಲಿರುವ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದೆ. ಅಭಿವೃದ್ದಿ ವಿಚಾರವನ್ನು ಚರ್ಚೆ ಮಾಡುವ ಯಾವುದೇ ಸರಕು ಸರ್ಕಾರದಲ್ಲಿಲ್ಲ. ಉತ್ತರ ಭಾರತ ಶೈಲಿಯ ಚುನಾವಣಾ ತಂತ್ರವನ್ನು ಕರ್ನಾಟಕದಲ್ಲಿ ಪರಿಚಯಿಸುವ ರೀತಿ ಕಾಣುತ್ತಿದೆ' ಎಂದು ಎಚ್ ಡಿಕೆ ತಿಳಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more