ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

Published : Mar 23, 2022, 04:40 PM IST

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ

ಭಾವನಾತ್ಮಾಕ ವಿಚಾರವನ್ನು ಮುಂದೆ ತರುವ ಹುನ್ನಾರ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು (ಮಾ. 23): ಹಿಂದೂ ಜಾತ್ರೆಗಳಲ್ಲಿ (HIndu Jatre) ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ನಿರ್ಬಂಧ ವಿಧಿಸಿರುವ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( former cm HD Kumaraswamy), ಬಿಜೆಪಿ (BJP) ಸರ್ಕಾರವನ್ನು ಟೀಕಿಸಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಇಂಥ ಗಿಮಿಕ್ ಗಳನ್ನು ಮಾಡಿಕೊಂಡೇ ಅಧಿಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಭಾವನಾತ್ಮಕ ವಿಚಾರವನ್ನು ಮುನ್ನಲೆಗೆ ತಂದು ಗಮನಸೆಳೆಯುವ ಪ್ರಯತ್ನ ಮಾಡಲಿದೆ ಎಂದು ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಮಂಗಳೂರಿನ (Mangaluru) ವಿಚಾರವನ್ನು ಇಡೀ ರಾಜ್ಯವ್ಯಾಪಿ ತರಲು ಸರ್ಕಾರ ಹೊರಟಿದೆ. ಚುನಾವಣೆಯ ಒಳಗೆ ಇನ್ನು ಏನೆಲ್ಲಾ ಮಾಡ್ತಾರೋ ಗೊತ್ತಿಲ್ಲ. ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರವಿದು ಎಂದು ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.

Kapu Marigudi Jatra: ಕಳಚಿದ ಸೌಹಾರ್ದತೆಯ ಕೊಂಡಿ, 2ನೇ ದಿನವು ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
ಬಿಜೆಪಿ ಹಾಗೂ ಅವರ ಸಂಘಟನೆಗಳು ಭಾವನಾತ್ಮಕ ವಿಚಾರವನ್ನು, ಕೋಮು ಸಂಘರ್ಷ ಕೆರಳಿಸುವ ವಿಚಾರಗಳನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ರಾಜ್ಯದಲ್ಲಿರುವ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದೆ. ಅಭಿವೃದ್ದಿ ವಿಚಾರವನ್ನು ಚರ್ಚೆ ಮಾಡುವ ಯಾವುದೇ ಸರಕು ಸರ್ಕಾರದಲ್ಲಿಲ್ಲ. ಉತ್ತರ ಭಾರತ ಶೈಲಿಯ ಚುನಾವಣಾ ತಂತ್ರವನ್ನು ಕರ್ನಾಟಕದಲ್ಲಿ ಪರಿಚಯಿಸುವ ರೀತಿ ಕಾಣುತ್ತಿದೆ' ಎಂದು ಎಚ್ ಡಿಕೆ ತಿಳಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more