ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರ

Published : Mar 23, 2022, 04:40 PM IST

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ

ಭಾವನಾತ್ಮಾಕ ವಿಚಾರವನ್ನು ಮುಂದೆ ತರುವ ಹುನ್ನಾರ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು (ಮಾ. 23): ಹಿಂದೂ ಜಾತ್ರೆಗಳಲ್ಲಿ (HIndu Jatre) ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ನಿರ್ಬಂಧ ವಿಧಿಸಿರುವ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( former cm HD Kumaraswamy), ಬಿಜೆಪಿ (BJP) ಸರ್ಕಾರವನ್ನು ಟೀಕಿಸಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಇಂಥ ಗಿಮಿಕ್ ಗಳನ್ನು ಮಾಡಿಕೊಂಡೇ ಅಧಿಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಭಾವನಾತ್ಮಕ ವಿಚಾರವನ್ನು ಮುನ್ನಲೆಗೆ ತಂದು ಗಮನಸೆಳೆಯುವ ಪ್ರಯತ್ನ ಮಾಡಲಿದೆ ಎಂದು ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಮಂಗಳೂರಿನ (Mangaluru) ವಿಚಾರವನ್ನು ಇಡೀ ರಾಜ್ಯವ್ಯಾಪಿ ತರಲು ಸರ್ಕಾರ ಹೊರಟಿದೆ. ಚುನಾವಣೆಯ ಒಳಗೆ ಇನ್ನು ಏನೆಲ್ಲಾ ಮಾಡ್ತಾರೋ ಗೊತ್ತಿಲ್ಲ. ಕೋಮು ಸಂಘರ್ಷದಿಂದ ರಾಜಕೀಯ ಲಾಭ ಪಡೆಯುವ ಹುನ್ನಾರವಿದು ಎಂದು ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.

Kapu Marigudi Jatra: ಕಳಚಿದ ಸೌಹಾರ್ದತೆಯ ಕೊಂಡಿ, 2ನೇ ದಿನವು ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
ಬಿಜೆಪಿ ಹಾಗೂ ಅವರ ಸಂಘಟನೆಗಳು ಭಾವನಾತ್ಮಕ ವಿಚಾರವನ್ನು, ಕೋಮು ಸಂಘರ್ಷ ಕೆರಳಿಸುವ ವಿಚಾರಗಳನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ರಾಜ್ಯದಲ್ಲಿರುವ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದೆ. ಅಭಿವೃದ್ದಿ ವಿಚಾರವನ್ನು ಚರ್ಚೆ ಮಾಡುವ ಯಾವುದೇ ಸರಕು ಸರ್ಕಾರದಲ್ಲಿಲ್ಲ. ಉತ್ತರ ಭಾರತ ಶೈಲಿಯ ಚುನಾವಣಾ ತಂತ್ರವನ್ನು ಕರ್ನಾಟಕದಲ್ಲಿ ಪರಿಚಯಿಸುವ ರೀತಿ ಕಾಣುತ್ತಿದೆ' ಎಂದು ಎಚ್ ಡಿಕೆ ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more