ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಪ್ರಶ್ನೆಯೇ ಇಲ್ಲ: ಸಿಎಂ

Jun 15, 2020, 5:01 PM IST

ಬೆಂಗಳೂರು (ಜೂ. 15): ಲಾಕ್‌ಡೌನ್ ಬಗ್ಗೆ ಒಂದಷ್ಟು ಗೊಂದಲಗಳಿತ್ತು. ಹಾಗಂತೆ, ಹೀಗಂತೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು.  ಈ ಬಗ್ಗೆ ಕೊನೆಗೂ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ.  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಇಲ್ಲ. ವೀಕೆಂಡ್ ಕೂಡಾ ಲಾಕ್‌ಡೌನ್ ಇರುವುದಿಲ್ಲ ಎಂದು ಸಿಎಂ ಲಾಕ್‌ಡೌನ್ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಜೊತೆಗೆ ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಕೂಡಾ ಜಾರಿ ಮಾಡುವ ಚಿಂತನೆ ಇಲ್ಲ. ಲಾಕ್‌ಡೌನ್‌ನ್ನು ಇನ್ನಷ್ಟು ಸಡಿಲಿಕೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ನಾಳೆ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಿದ್ದೇವೆ ಎಂದಿದ್ದಾರೆ. 

ಮಾಸ್ಕ್ ಡೇ, ಮತ್ತೆ ಲಾಕ್‌ಡೌನ್ ಬಗ್ಗೆ ಬಿಎಸ್‌ವೈ ಸುದ್ದಿಗೋಷ್ಠಿಯ ಪ್ರಮುಖಾಂಶಗಳು..!