ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಇಲ್ಲ: ಸಿಎಂ ಬಿಎಸ್‌ವೈ ಸ್ಪಷ್ಟನೆ

Jul 27, 2020, 6:23 PM IST

ಬೆಂಗಳೂರು(ಜು.27): ಕೋವಿಡ್ ಜತೆ ಬದುಕು ಸಾಗಿಸುವುದನ್ನು ಕಲಿಯಬೇಕಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. 

ಮೊದಲಿನಿಂದಲೂ ಮುಖ್ಯಮಂತ್ರಿ ಬಿಎಸ್‌ವೈ ಲಾಕ್‌ಡೌನ್‌ಗೆ ತಮ್ಮ ಅಸಮ್ಮತಿಯನ್ನು ಸೂಚಿಸುತ್ತಲೇ ಬಂದಿದ್ದರು. ಇದೀಗ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಜುಲೈ 31 ಕ್ಕೆ ಅನ್‌ಲಾಕ್ 2.0 ಅಂತ್ಯ; ಆಗಸ್ಟ್‌‌ 1 ರಿಂದ ನಯಾ ಲೈಫ್ ಹೇಗಿರತ್ತೆ ಗೊತ್ತಾ?

ಲಾಕ್‌ಡೌನ್ ಬಗ್ಗೆ ನಾವು ಚರ್ಚೆಗೆ ಹೋಗುವುದಿಲ್ಲ. ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇದೇ ಸೂಚನೆಯನ್ನು ನೀಡಿದ್ದೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.