ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗೋ ಪ್ರಶ್ನೆನೇ ಇಲ್ಲ: ಸಿಎಂ ಬೊಮ್ಮಾಯಿ

ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗೋ ಪ್ರಶ್ನೆನೇ ಇಲ್ಲ: ಸಿಎಂ ಬೊಮ್ಮಾಯಿ

Published : Aug 23, 2022, 05:14 PM IST

ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದು ಮಾಡಿ, ಲೋಕಾಯುಕ್ತಕ್ಕೆ ಅಧಿಕಾರ ನೀಡುವ ಹೈಕೋರ್ಟ್‌ನ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವ್ಯಕ್ತಿಯೊಬ್ಬ ಈ ಕುರಿತಾಗಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದು ರಾಜ್ಯ ಸರ್ಕಾರದ ನಿರ್ಧಾರವಲ್ಲ ಎಂದು ಹೇಳಿದ್ದಾರೆ.

 

ಬೆಂಗಳೂರು (ಆ.23): ಎಸಿಬಿ ಪ್ರಶ್ನಿಸಿ ಸುಪ್ರೀ ಕೋರ್ಟ್‌ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿದೆ ಎನ್ನುವ ವಿಚಾರವಾಗಿ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರದಿಂದ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಖಾಸಗಿ ವ್ಯಕ್ತಿ ಸಲ್ಲಿಸಿದ ಅರ್ಜಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಎಸಿಬಿ ರದ್ದು ಕುರಿತು ಹೈಕೋರ್ಟ್‌ ಆದೇಶವನ್ನೇ ಸರ್ಕಾರ ಪಾಲಿಸಲಿದೆ ಎಂದು ಹೇಳಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಮಂಗಳವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೊಮ್ಮಾಯಿ, ಎಸಿಬಿ ಕುರಿತಾಗಿ ಹೈಕೋರ್ಟ್‌ ನೀಡಿದ ಆದೇಶ ಹಾಗೂ ಪ್ರಣಾಳಿಕೆಯಲ್ಲಿ ನಾವು ಹೇಳಿದ ಅಂಶ ಎರಡೂ ಒಂದೇ. ಹಾಗಾಗಿ ಇದರ ಬಗ್ಗೆ ಮೇಲ್ಮನವಿ ಮಾಡುವ ಪ್ರಶ್ನೆಯೇ ಇಲ್ಲ. ಹೈಕೋರ್ಟ್‌ ಆದೇಶವನ್ನು ಹೇಗೆ ಜಾರಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಖಾಸಗಿ ಅರ್ಜಿ

ಆದೇಶ ಬಂದ ಮೊದಲ ದಿನವೇ ಕ್ಯಾಬಿನೆಟ್‌ ಸಭೆ ಸೇರಿದ್ದೆವು. ಆಗಲೇ ಈ ಬಗ್ಗೆ ಮೇಲ್ಮನವಿ ಮಾಡಬಾರದು ಎಂದು ತೀರ್ಮಾನ ಮಾಡಿದ್ದೆವು. ಈಗ ಮೇಲ್ಮನವಿ ಸಲ್ಲಿಸಿರುವುದು ಯಾವುದೋ ಖಾಸಗಿ ವ್ಯಕ್ತಿ. ಆದರೆ, ಹೈಕೋರ್ಟ್‌ ಆದೇಶವನ್ನು ಸರ್ಕಾರ ಪಾಲನೆ ಮಾಡಲಿದೆ ಎಂದು ತಿಳಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more