ರೆಡ್‌ ಝೋನ್‌ನಲ್ಲಿ ಲಾಕ್‌ಡೌನ್ ಫಿಕ್ಸ್.! ಆರೆಂಜ್, ಗ್ರೀನ್ ಝೋನ್ ಕಥೆ ಏನು?

ರೆಡ್‌ ಝೋನ್‌ನಲ್ಲಿ ಲಾಕ್‌ಡೌನ್ ಫಿಕ್ಸ್.! ಆರೆಂಜ್, ಗ್ರೀನ್ ಝೋನ್ ಕಥೆ ಏನು?

Suvarna News   | Asianet News
Published : Apr 27, 2020, 06:09 PM IST

ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ, ಸಲಹೆಗಳಿಗೆ ಕಿವಿಯಾದರು. ಈಗಾಗಲೇ ದೇಶದಾದ್ಯಂತ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. 

ನವದೆಹಲಿ(ಏ.27):  ಕೊರೋನಾ ಹಾಟ್‌ಸ್ಪಾಟ್ ಎನಿಸಿರುವ ರೆಡ್‌ ಝೋನ್‌ಗಳಲ್ಲಿ ಲಾಕ್‌ಡೌನ್ ಮೇ 15ರವರೆಗೆ ಮುಂದುವರೆಯುತ್ತಾ ಎನ್ನುವ ಸಂಶಯ ದಟ್ಟವಾಗಲಾರಂಭಿಸಿದೆ. ಇನ್ನು ಆರೆಂಜ್ ಹಾಗೂ ಗ್ರೀನ್ ಝೋನ್‌ಗಳಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲಗೊಳ್ಳಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಹೀಗೆಲ್ಲಾ ಗುಸುಗುಸು ಆರಂಭವಾಗಲು ಕಾರಣ ಸೋಮವಾರವಾದ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ, ಸಲಹೆಗಳಿಗೆ ಕಿವಿಯಾದರು. ಈಗಾಗಲೇ ದೇಶದಾದ್ಯಂತ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. 

ರೆಡ್‌ ಝೋನ್‌ ಕಂಪ್ಲೀಟ್ ಲಾಕ್‌ಡೌನ್, ಆರೆಂಜ್ ಝೋನ್ ಅಲ್ಪ ಸಡಿಲಿಕೆ ಹಾಗೂ ಗ್ರೀನ್ ಝೋನ್‌ನಲ್ಲಿ ಜಾಸ್ತಿ ಸಡಿಲಿಕೆ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಪ್ರಧಾನಿ ಮೋದಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 

"

ಮೊದಲ ಹಂತದಲ್ಲಿ ಪ್ರಧಾನಿ ಮೋದಿ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಏಪ್ರಿಲ್ 14ರಿಂದ ಮೇ 03ರವರೆಗೆ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಮುಂದೇನು ಮಾಡಬೇಕು ಎನ್ನುವುದರ ಬಗ್ಗೆ ಮುಖ್ಯ ಮಂತ್ರಿಗಳ ಮಾತನ್ನು ಪ್ರಧಾನಿ ಆಲಿಸಿದರು. ಆರು ರಾಜ್ಯಗಳು ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿವೆ. ಇನ್ನು ಕರ್ನಾಟಕ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್
ಇಲ್ಲಿದೆ ನೋಡಿ.  

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!