7 ವಿವಿ ಕುಲಪತಿಗಳಿಗೆ 7 ತಿಂಗಳಿನಿಂದ ಸಿಕ್ಕಿಲ್ಲ ಸಂಬಳ..! ಹೊಸ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರದ ನಿರ್ಲಕ್ಷ್ಯವೇಕೆ..?

7 ವಿವಿ ಕುಲಪತಿಗಳಿಗೆ 7 ತಿಂಗಳಿನಿಂದ ಸಿಕ್ಕಿಲ್ಲ ಸಂಬಳ..! ಹೊಸ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರದ ನಿರ್ಲಕ್ಷ್ಯವೇಕೆ..?

Published : Oct 12, 2023, 10:55 AM IST

ರಾಜ್ಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು ಸರ್ಕಾರ ಹಗಲಿರಳು ಶ್ರಮಿಸುತ್ತಿದೆ. ಅಗತ್ಯ ಕಾಲೇಜು, ವಿಶ್ವವಿದ್ಯಾಲಯಗಳನ್ನ  ನಿರ್ಮಿಸುತ್ತಿದೆ. ಆದ್ರೆ ಜಿಲ್ಲೆಗೊಂದು ಯೂನಿವರ್ಸಿಟಿ ಮಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ.ಕಳೆದ 7 ತಿಂಗಳಿನಿಂದ  ಹೊಸ ವಿವಿಗಳ ಕುಲಪತಿಗಳಿಗೆ ಸರ್ಕಾರ ಸಂಬಳ ನೀಡಿಲ್ಲ. ಅದಷ್ಟೇ ಅಲ್ಲ ವಿವಿ ಕಾರ್ಯ ಚಟುವಟಿಕೆಗಳಿಗೂ ಅನುದಾನ ನೀಡಿಲ್ಲ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 7 ಹೊಸ ವಿವಿಗಳನ್ನ ಸ್ಥಾಪನೆ ಮಾಡಿತ್ತು. ಕಳೆದ ವರ್ಷ ನವೆಂಬರ್ನಲ್ಲಿ ಉಪ ಕುಲಪತಿಗಳನ್ನೂ ನೇಮಕ ಮಾಡಿತ್ತು. ಆಗ ಆವರ್ತಕ ವೆಚ್ಚವಾಗಿ 2 ಕೋಟಿ ಹಣ ಬಿಡುಗಡೆ ‌ಮಾಡುವುದಾಗಿ ಹೇಳಿದ್ದ ಬಿಜೆಪಿ(BJP) ಸರ್ಕಾರ ಬಿಡುಗಡೆ ‌ಮಾಡಿರಲಿಲ್ಲ. ಈಗ ಅಧಿಕಾರದಲ್ಲಿರೋ ಕಾಂಗ್ರೆಸ್(Congress) ಸರ್ಕಾರ ಕೂಡ ಹೊಸ ವಿವಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ವಿಸಿಗಳಿಗೂ 7 ತಿಂಗಳಿಂದ ಸಂಬಳ ಸಿಕ್ಕಿಲ್ಲ. ಹೊಸ ವಿವಿಗಳಿಗೆ ವಿಸಿಗಳ ನೇಮಕಾತಿ ವೇಳೆ ಹೊಸ ವಾಹನ , ಹೊಸ ಕಟ್ಟಡ ನಿರ್ಮಾಣ, ಹುದ್ದೆಗಳ ನೇಮಕ ಮಾಡಿಕೊಳ್ಳುವಂತಿಲ್ಲ ಅನ್ನೋ ಷರತ್ತು ಹಾಕಿ ನೇಮಕ ಮಾಡಲಾಗಿದೆ. ಕಳೆದ 7 ತಿಂಗಳಿನಿಂದ ಸಂಬಳ ಇಲ್ಲ, ಓಡಾಡಲು ಕಾರು ಸಹ ಇಲ್ಲ.ತಮ್ಮ ಕಷ್ಟವನ್ನ ನೇರವಾಗಿ ಮಾಧ್ಯಮಗಳ ಮುಂದೆಯೂ ಹೇಳಿಕೊಳ್ಳಲಾಗದ ವಿಸಿಗಳು ಪರದಾಡುತ್ತಿದ್ದಾರೆ. ಆಗಿನ ಸರ್ಕಾರ ಅವೈಜ್ಞಾನಿಕವಾಗಿ ಹೊಸ ವಿವಿಗಳನ್ನ ಸ್ಥಾಪನೆ ಮಾಡಿದೆ. ಈಗ ಏನು ಮಾಡಬೇಕು ಅಂತ ಸಿಎಂ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ(Siddaramaiah) ಸರ್ಕಾರ ಗ್ಯಾರಂಟಿಗಳಿಗೇ ಹಣ ಹೊಂದಿಸಲು ಹೆಣಗಾಡುತ್ತಿದೆ. ಹೀಗಿರುವಾಗ ಹೊಸ ವಿವಿಗಳಿಗೆ ಹಣ ಬಿಡುಗಡೆ ಆಗುತ್ತಾ..? ವಿಸಿಗಳಿಗೆ ಸಂಬಳ ನೀಡುತ್ತಾ ಅನ್ನೋ ಪ್ರಶ್ನೆ ಎದ್ದಿದೆ... ಸಂಬಳ ನೀಡದಿದ್ದರೆ ವಿವಿಗಳ ಸ್ಥಾಪನೆ ಮಾಡಿದ್ಯಾಕೆ..? ಸಂಬಳವಿಲ್ಲದ ವಿಸಿಗಳು ಏನ್ ಮಾಡಬೇಕು ಅನ್ನೋದಕ್ಕೆ ಸರ್ಕಾರವೇ ಉತ್ತರಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಲೋಕಸಭೆ ಗೆಲ್ಲೋಕೆ ಜೆಡಿಎಸ್ ಶಕ್ತಿಪ್ರದರ್ಶನ: ವಿಜಯಪುರದಲ್ಲಿ ‘ಪುನರ್‌ಚೇತನ ಪರ್ವ’ ಸಂಭ್ರಮ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more