ಶಿವಕುಮಾರ ಶ್ರೀಗಳ 115 ನೇ  ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ಧಗಂಗೆ..!

ಶಿವಕುಮಾರ ಶ್ರೀಗಳ 115 ನೇ ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ಧಗಂಗೆ..!

Published : Apr 01, 2022, 10:12 AM ISTUpdated : Apr 01, 2022, 10:28 AM IST

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವಕ್ಕೆ ಸಿದ್ಧಗಂಗಾ ಮಠ ಸಜ್ಜಾಗಿದೆ. ಎರಡು ವರ್ಷಗಳ ಕಾಲ ಕೊರೋನಾ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಅದಾದ ಬಳಿಕ ಇದೇ ಮೊದಲ ಬಾರಿಗೆ ಶ್ರೀಗಳ ಜನ್ಮ​ದಿ​ನ​ವ​ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ತುಮಕೂರು (ಏ. 01): ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ (Dr Shivakumara Swamiji) ಅವರ 115ನೇ ಜಯಂತ್ಯುತ್ಸವಕ್ಕೆ (Birth Anniversary) ಸಿದ್ಧಗಂಗಾ ಮಠ ಸಜ್ಜಾಗಿದೆ. 2019ರ ಜನವರಿಯಲ್ಲಿ ಶ್ರೀಗಳು ಲಿಂಗೈಕ್ಯರಾಗಿದ್ದು, ಅದೇ ವರ್ಷ ಏಪ್ರಿಲ್‌ನಲ್ಲಿ ಅವರ ಹುಟ್ಟಿದ ಹಬ್ಬ ಆಚರಣೆಯನ್ನು ಶ್ರೀ ಮಠದ ಆವರಣದಲ್ಲಿ ಮಾಡಲಾಗಿತ್ತು. ಎರಡು ವರ್ಷಗಳ ಕಾಲ ಕೊರೋನಾ (Covid 19) ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಅದಾದ ಬಳಿಕ ಇದೇ ಮೊದಲ ಬಾರಿಗೆ ಶ್ರೀಗಳ ಜನ್ಮ​ದಿ​ನ​ವ​ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಶ್ರೀಗಳ ಜಯಂತ್ಯೋತ್ಸವಕ್ಕೆ 4 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದ​ಕ್ಕಾಗಿ ವಸ್ತುಪ್ರದರ್ಶನ ಮೈದಾನದ ಪಕ್ಕ ಬೃಹದಾಕಾರದ ವೇದಿಕೆ ನಿರ್ಮಿಸಲಾಗಿದೆ. ಈ ವೇದಿಕೆ ಮುಂಭಾಗ 10 ಸಾವಿರಕ್ಕೂ ಹೆಚ್ಚು ಮಂದಿಗೆ ಕೂರಲು ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಭಕ್ತರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 8 ಕಡೆ ವ್ಯವಸ್ಥೆ ಮಾಡಲಾಗಿದೆ. ಮಠದ ಆವರಣದಲ್ಲಿರುವ ಹಳೇ ಊಟದ ಮನೆ, ಹೊಸ ಊಟದ ಮನೆ, ಪ್ರಾರ್ಥನಾ ಮಂದಿರ, ಕೆಂಪಹೊನ್ನಯ್ಯ ಅತಿಥಿ ಗೃಹ, ಸೌದೆ ಕೊಪ್ಪಲು, ಸಿದ್ದಾರ್ಥ ಅತಿಥಿ ಗೃಹ, ಉದ್ದಾನೇಶ್ವರ ಊಟದ ಮನೆ ಸೇರಿ ಎಂಟು ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ ಮತ್ತು ರಾತ್ರಿಯೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more