ಶಿವಕುಮಾರ ಶ್ರೀಗಳ 115 ನೇ  ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ಧಗಂಗೆ..!

ಶಿವಕುಮಾರ ಶ್ರೀಗಳ 115 ನೇ ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ಧಗಂಗೆ..!

Published : Apr 01, 2022, 10:12 AM ISTUpdated : Apr 01, 2022, 10:28 AM IST

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವಕ್ಕೆ ಸಿದ್ಧಗಂಗಾ ಮಠ ಸಜ್ಜಾಗಿದೆ. ಎರಡು ವರ್ಷಗಳ ಕಾಲ ಕೊರೋನಾ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಅದಾದ ಬಳಿಕ ಇದೇ ಮೊದಲ ಬಾರಿಗೆ ಶ್ರೀಗಳ ಜನ್ಮ​ದಿ​ನ​ವ​ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ತುಮಕೂರು (ಏ. 01): ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ (Dr Shivakumara Swamiji) ಅವರ 115ನೇ ಜಯಂತ್ಯುತ್ಸವಕ್ಕೆ (Birth Anniversary) ಸಿದ್ಧಗಂಗಾ ಮಠ ಸಜ್ಜಾಗಿದೆ. 2019ರ ಜನವರಿಯಲ್ಲಿ ಶ್ರೀಗಳು ಲಿಂಗೈಕ್ಯರಾಗಿದ್ದು, ಅದೇ ವರ್ಷ ಏಪ್ರಿಲ್‌ನಲ್ಲಿ ಅವರ ಹುಟ್ಟಿದ ಹಬ್ಬ ಆಚರಣೆಯನ್ನು ಶ್ರೀ ಮಠದ ಆವರಣದಲ್ಲಿ ಮಾಡಲಾಗಿತ್ತು. ಎರಡು ವರ್ಷಗಳ ಕಾಲ ಕೊರೋನಾ (Covid 19) ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಅದಾದ ಬಳಿಕ ಇದೇ ಮೊದಲ ಬಾರಿಗೆ ಶ್ರೀಗಳ ಜನ್ಮ​ದಿ​ನ​ವ​ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಶ್ರೀಗಳ ಜಯಂತ್ಯೋತ್ಸವಕ್ಕೆ 4 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದ​ಕ್ಕಾಗಿ ವಸ್ತುಪ್ರದರ್ಶನ ಮೈದಾನದ ಪಕ್ಕ ಬೃಹದಾಕಾರದ ವೇದಿಕೆ ನಿರ್ಮಿಸಲಾಗಿದೆ. ಈ ವೇದಿಕೆ ಮುಂಭಾಗ 10 ಸಾವಿರಕ್ಕೂ ಹೆಚ್ಚು ಮಂದಿಗೆ ಕೂರಲು ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಭಕ್ತರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 8 ಕಡೆ ವ್ಯವಸ್ಥೆ ಮಾಡಲಾಗಿದೆ. ಮಠದ ಆವರಣದಲ್ಲಿರುವ ಹಳೇ ಊಟದ ಮನೆ, ಹೊಸ ಊಟದ ಮನೆ, ಪ್ರಾರ್ಥನಾ ಮಂದಿರ, ಕೆಂಪಹೊನ್ನಯ್ಯ ಅತಿಥಿ ಗೃಹ, ಸೌದೆ ಕೊಪ್ಪಲು, ಸಿದ್ದಾರ್ಥ ಅತಿಥಿ ಗೃಹ, ಉದ್ದಾನೇಶ್ವರ ಊಟದ ಮನೆ ಸೇರಿ ಎಂಟು ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ ಮತ್ತು ರಾತ್ರಿಯೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more