ಕೆರೆ ಕಟ್ಟೆ ಒಡೆದು ಜಮೀನಿಗೆ ನುಗ್ಗಿದ ನೀರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶ

Aug 9, 2020, 4:08 PM IST

ಬೆಂಗಳೂರು (ಆ. 09): ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದೆ. ಬೆಳಗಾವಿ ತಾ. ಬೆಂಡಿಗೇರಿ ಬಳಿ ಕೆರೆ ಕಟ್ಟೆ ಒಡೆದು ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಹಿಂದೆಯೇ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದರು. ಮನವಿ ಮಾಡಿಕೊಂಡಿದ್ದರು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಗ್ನಿಶಾಮಕ ಸಿಬ್ಬಂದಿಯಿಂದ ಪ್ರವಾಹದಿಂದ ಸಿಲುಕಿದ್ದ 40 ಕೋತಿಗಳ ರಕ್ಷಣೆ