Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Suvarna News   | Asianet News
Published : Dec 03, 2021, 04:47 PM ISTUpdated : Dec 03, 2021, 05:20 PM IST

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್‌ (Omicron Variant)  ಸೋಂಕು ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಬೆಂಗಳೂರು (ಡಿ. 03): ರಾಜ್ಯದಲ್ಲಿ ಪತ್ತೆಯಾಗಿರುವ ಎರಡೂ ಒಮಿಕ್ರೋನ್‌ (Omicron Case) ಪ್ರಕರಣಗಳು ರಾಜಧಾನಿಯಲ್ಲೇ ಬೆಳಕಿಗೆ ಬಂದಿವೆ. ನ.20 ರಂದು ದಕ್ಷಿಣ ಆಫ್ರಿಕಾದಿಂದ (South Africa) ಆಗಮಿಸಿದ್ದ 66 ವರ್ಷದ ವ್ಯಕ್ತಿ ಹಾಗೂ ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲದ ಬೆಂಗಳೂರು ಮೂಲದ 46 ವರ್ಷದ ವೈದ್ಯ ಸೇರಿ ಇಬ್ಬರಿಗೆ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಈ ಪೈಕಿ 66 ವರ್ಷದ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಯಾರಿಗೂ ಸೋಂಕು ದೃಢಪಟ್ಟಿಲ್ಲ. ಆದರೆ, ಬೆಂಗಳೂರು ಮೂಲದ 46 ವರ್ಷದ ವೈದ್ಯರ ಪ್ರಾಥಮಿಕ ಸಂಪರ್ಕಿತರಲ್ಲಿ ಮೂವರು ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಇಬ್ಬರು ಸೇರಿ ಐದು ಮಂದಿ ಸಂಪರ್ಕಿತರಿಗೆ ಸೋಂಕು ದೃಢಪಟ್ಟಿದೆ. ಇದು ತೀವ್ರ ಆತಂಕ ಮೂಡಿಸಿದ್ದು, ಐವರ ರಕ್ತದ ಮಾದರಿಗಳನ್ನೂ ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ರವಾನಿಸಲಾಗಿದೆ. ರಾಜ್ಯದಲ್ಲಿ ಒಮಿಕ್ರೋನ್‌ ತಳಿ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ಮುನ್ನೆಚ್ಚರಿಕಾ ಕ್ರಮಗಳು, ನಿರ್ಬಂಧಗಳ ಬಗ್ಗೆ ಚರ್ಚೆ ನಡೆಸಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more