Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Suvarna News   | Asianet News
Published : Dec 03, 2021, 04:47 PM ISTUpdated : Dec 03, 2021, 05:20 PM IST

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್‌ (Omicron Variant)  ಸೋಂಕು ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಬೆಂಗಳೂರು (ಡಿ. 03): ರಾಜ್ಯದಲ್ಲಿ ಪತ್ತೆಯಾಗಿರುವ ಎರಡೂ ಒಮಿಕ್ರೋನ್‌ (Omicron Case) ಪ್ರಕರಣಗಳು ರಾಜಧಾನಿಯಲ್ಲೇ ಬೆಳಕಿಗೆ ಬಂದಿವೆ. ನ.20 ರಂದು ದಕ್ಷಿಣ ಆಫ್ರಿಕಾದಿಂದ (South Africa) ಆಗಮಿಸಿದ್ದ 66 ವರ್ಷದ ವ್ಯಕ್ತಿ ಹಾಗೂ ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲದ ಬೆಂಗಳೂರು ಮೂಲದ 46 ವರ್ಷದ ವೈದ್ಯ ಸೇರಿ ಇಬ್ಬರಿಗೆ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಈ ಪೈಕಿ 66 ವರ್ಷದ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಯಾರಿಗೂ ಸೋಂಕು ದೃಢಪಟ್ಟಿಲ್ಲ. ಆದರೆ, ಬೆಂಗಳೂರು ಮೂಲದ 46 ವರ್ಷದ ವೈದ್ಯರ ಪ್ರಾಥಮಿಕ ಸಂಪರ್ಕಿತರಲ್ಲಿ ಮೂವರು ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಇಬ್ಬರು ಸೇರಿ ಐದು ಮಂದಿ ಸಂಪರ್ಕಿತರಿಗೆ ಸೋಂಕು ದೃಢಪಟ್ಟಿದೆ. ಇದು ತೀವ್ರ ಆತಂಕ ಮೂಡಿಸಿದ್ದು, ಐವರ ರಕ್ತದ ಮಾದರಿಗಳನ್ನೂ ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ರವಾನಿಸಲಾಗಿದೆ. ರಾಜ್ಯದಲ್ಲಿ ಒಮಿಕ್ರೋನ್‌ ತಳಿ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ಮುನ್ನೆಚ್ಚರಿಕಾ ಕ್ರಮಗಳು, ನಿರ್ಬಂಧಗಳ ಬಗ್ಗೆ ಚರ್ಚೆ ನಡೆಸಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more