Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Published : Dec 03, 2021, 04:47 PM ISTUpdated : Dec 03, 2021, 05:20 PM IST

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್‌ (Omicron Variant)  ಸೋಂಕು ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಬೆಂಗಳೂರು (ಡಿ. 03): ರಾಜ್ಯದಲ್ಲಿ ಪತ್ತೆಯಾಗಿರುವ ಎರಡೂ ಒಮಿಕ್ರೋನ್‌ (Omicron Case) ಪ್ರಕರಣಗಳು ರಾಜಧಾನಿಯಲ್ಲೇ ಬೆಳಕಿಗೆ ಬಂದಿವೆ. ನ.20 ರಂದು ದಕ್ಷಿಣ ಆಫ್ರಿಕಾದಿಂದ (South Africa) ಆಗಮಿಸಿದ್ದ 66 ವರ್ಷದ ವ್ಯಕ್ತಿ ಹಾಗೂ ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲದ ಬೆಂಗಳೂರು ಮೂಲದ 46 ವರ್ಷದ ವೈದ್ಯ ಸೇರಿ ಇಬ್ಬರಿಗೆ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಈ ಪೈಕಿ 66 ವರ್ಷದ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಯಾರಿಗೂ ಸೋಂಕು ದೃಢಪಟ್ಟಿಲ್ಲ. ಆದರೆ, ಬೆಂಗಳೂರು ಮೂಲದ 46 ವರ್ಷದ ವೈದ್ಯರ ಪ್ರಾಥಮಿಕ ಸಂಪರ್ಕಿತರಲ್ಲಿ ಮೂವರು ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಇಬ್ಬರು ಸೇರಿ ಐದು ಮಂದಿ ಸಂಪರ್ಕಿತರಿಗೆ ಸೋಂಕು ದೃಢಪಟ್ಟಿದೆ. ಇದು ತೀವ್ರ ಆತಂಕ ಮೂಡಿಸಿದ್ದು, ಐವರ ರಕ್ತದ ಮಾದರಿಗಳನ್ನೂ ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ರವಾನಿಸಲಾಗಿದೆ. ರಾಜ್ಯದಲ್ಲಿ ಒಮಿಕ್ರೋನ್‌ ತಳಿ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ಮುನ್ನೆಚ್ಚರಿಕಾ ಕ್ರಮಗಳು, ನಿರ್ಬಂಧಗಳ ಬಗ್ಗೆ ಚರ್ಚೆ ನಡೆಸಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more