ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

Published : Sep 09, 2023, 10:42 AM IST

ಮೈಸೂರಿನಲ್ಲಿ ದಸರಾಗೂ ಮುನ್ನವೇ ಮಹಿಷ ದಸರಾ ಹೆಚ್ಚು ಸದ್ದು ಮಾಡುತ್ತಿದೆ. ಸರ್ಕಾರದಿಂದ ಅನುಮತಿಯೇ ಸಿಗದಿದ್ದರೂ ಬೆಟ್ಟದಲ್ಲೇ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಸಮಿತಿ ತೀರ್ಮಾನ ಮಾಡಿದೆ. ಇತ್ತ ಗಲಾಟೆ ಆದ್ರೂ ಸರಿಯೇ ನಾವು ಅವಕಾಶ ಕೊಡಲ್ಲ ಎನ್ನುತ್ತಿದ್ದಾರೆ ಸಂಸದ ಪ್ರತಾಪ್ ಸಿಂಹ. ಆದರೆ ಸರ್ಕಾರದ ಮೌನ ಅಧಿಕಾರಿಗಳಲ್ಲಿ ಗೊಂದಲ ಮೂಡಿಸುತ್ತಿದೆ.

ಅರಮನೆ ನಗರಿಯಲ್ಲಿ ವಿಶ್ವ ವಿಖ್ಯಾತಿ ಮೈಸೂರು ದಸರಾಗೆ(Dasara) ಭರ್ಜರಿ ತಯಾರಿ ನಡೆಸಿದೆ. ಇದರ ನಡುವೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ(Chamundi Hill) ಮಹಿಷ ದಸರಾ(Mahisha dasara) ವಿವಾದ ಭುಗಿಲೆದ್ದಿದೆ. ಸರ್ಕಾರದಿಮದ ಅನುಮತಿ ದೊರೆಯುವುದಕ್ಕೂ ಮುನ್ನವೇ ಆಚರಣೆಗೆ ಸಿದ್ಧತೆ ಶುರುವಾಗಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ  ಅನುಮತಿ ನೀಡದ ಕಾರಣ ಸ್ಥಗಿತಗೊಂಡಿದ್ದ  ಮಹಿಷ ದಸರಾವನ್ನು ಈ ಬಾರಿ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ನಿರ್ಧರಿಸಿದೆ. ಸದ್ಯ ಇದುವರೆಗೂ ಮಹಿಷ ದಸರಾ ಆಚರಣೆಗೆ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ. ಆದರೆ  ಇದೇ ಅಕ್ಟೋಬರ್ 15 ರಂದು ಸಾಂಪ್ರದಾಯಿಕ ದಸರಾ ಉದ್ಘಾಟನೆ ಆಗುತ್ತಿದ್ದು, ಅದಕ್ಕೂ 2 ದಿನ ಮುನ್ನವೇ ಮಹಿಷ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣಾ ಸಮಿತಿ ತೀರ್ಮಾನಿಸಿದೆ. ಈ ಸಂಬಂಧ ಕರಪತ್ರವನ್ನೂ ಹಂಚಲಾಗ್ತಿದೆ. ಮಹಿಷ ದಸರ ಆಚರಣೆಗೆ ಸಂಸದ ಪ್ರತಾಪ್ ಸಿಂಹ(Pratap Simha) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘರ್ಷಣೆ ಆದರೂ ಸರಿಯೇ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more