ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

Published : Sep 09, 2023, 10:42 AM IST

ಮೈಸೂರಿನಲ್ಲಿ ದಸರಾಗೂ ಮುನ್ನವೇ ಮಹಿಷ ದಸರಾ ಹೆಚ್ಚು ಸದ್ದು ಮಾಡುತ್ತಿದೆ. ಸರ್ಕಾರದಿಂದ ಅನುಮತಿಯೇ ಸಿಗದಿದ್ದರೂ ಬೆಟ್ಟದಲ್ಲೇ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಸಮಿತಿ ತೀರ್ಮಾನ ಮಾಡಿದೆ. ಇತ್ತ ಗಲಾಟೆ ಆದ್ರೂ ಸರಿಯೇ ನಾವು ಅವಕಾಶ ಕೊಡಲ್ಲ ಎನ್ನುತ್ತಿದ್ದಾರೆ ಸಂಸದ ಪ್ರತಾಪ್ ಸಿಂಹ. ಆದರೆ ಸರ್ಕಾರದ ಮೌನ ಅಧಿಕಾರಿಗಳಲ್ಲಿ ಗೊಂದಲ ಮೂಡಿಸುತ್ತಿದೆ.

ಅರಮನೆ ನಗರಿಯಲ್ಲಿ ವಿಶ್ವ ವಿಖ್ಯಾತಿ ಮೈಸೂರು ದಸರಾಗೆ(Dasara) ಭರ್ಜರಿ ತಯಾರಿ ನಡೆಸಿದೆ. ಇದರ ನಡುವೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ(Chamundi Hill) ಮಹಿಷ ದಸರಾ(Mahisha dasara) ವಿವಾದ ಭುಗಿಲೆದ್ದಿದೆ. ಸರ್ಕಾರದಿಮದ ಅನುಮತಿ ದೊರೆಯುವುದಕ್ಕೂ ಮುನ್ನವೇ ಆಚರಣೆಗೆ ಸಿದ್ಧತೆ ಶುರುವಾಗಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ  ಅನುಮತಿ ನೀಡದ ಕಾರಣ ಸ್ಥಗಿತಗೊಂಡಿದ್ದ  ಮಹಿಷ ದಸರಾವನ್ನು ಈ ಬಾರಿ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ನಿರ್ಧರಿಸಿದೆ. ಸದ್ಯ ಇದುವರೆಗೂ ಮಹಿಷ ದಸರಾ ಆಚರಣೆಗೆ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ. ಆದರೆ  ಇದೇ ಅಕ್ಟೋಬರ್ 15 ರಂದು ಸಾಂಪ್ರದಾಯಿಕ ದಸರಾ ಉದ್ಘಾಟನೆ ಆಗುತ್ತಿದ್ದು, ಅದಕ್ಕೂ 2 ದಿನ ಮುನ್ನವೇ ಮಹಿಷ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣಾ ಸಮಿತಿ ತೀರ್ಮಾನಿಸಿದೆ. ಈ ಸಂಬಂಧ ಕರಪತ್ರವನ್ನೂ ಹಂಚಲಾಗ್ತಿದೆ. ಮಹಿಷ ದಸರ ಆಚರಣೆಗೆ ಸಂಸದ ಪ್ರತಾಪ್ ಸಿಂಹ(Pratap Simha) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘರ್ಷಣೆ ಆದರೂ ಸರಿಯೇ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more