ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

Published : Sep 09, 2023, 10:42 AM IST

ಮೈಸೂರಿನಲ್ಲಿ ದಸರಾಗೂ ಮುನ್ನವೇ ಮಹಿಷ ದಸರಾ ಹೆಚ್ಚು ಸದ್ದು ಮಾಡುತ್ತಿದೆ. ಸರ್ಕಾರದಿಂದ ಅನುಮತಿಯೇ ಸಿಗದಿದ್ದರೂ ಬೆಟ್ಟದಲ್ಲೇ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಸಮಿತಿ ತೀರ್ಮಾನ ಮಾಡಿದೆ. ಇತ್ತ ಗಲಾಟೆ ಆದ್ರೂ ಸರಿಯೇ ನಾವು ಅವಕಾಶ ಕೊಡಲ್ಲ ಎನ್ನುತ್ತಿದ್ದಾರೆ ಸಂಸದ ಪ್ರತಾಪ್ ಸಿಂಹ. ಆದರೆ ಸರ್ಕಾರದ ಮೌನ ಅಧಿಕಾರಿಗಳಲ್ಲಿ ಗೊಂದಲ ಮೂಡಿಸುತ್ತಿದೆ.

ಅರಮನೆ ನಗರಿಯಲ್ಲಿ ವಿಶ್ವ ವಿಖ್ಯಾತಿ ಮೈಸೂರು ದಸರಾಗೆ(Dasara) ಭರ್ಜರಿ ತಯಾರಿ ನಡೆಸಿದೆ. ಇದರ ನಡುವೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ(Chamundi Hill) ಮಹಿಷ ದಸರಾ(Mahisha dasara) ವಿವಾದ ಭುಗಿಲೆದ್ದಿದೆ. ಸರ್ಕಾರದಿಮದ ಅನುಮತಿ ದೊರೆಯುವುದಕ್ಕೂ ಮುನ್ನವೇ ಆಚರಣೆಗೆ ಸಿದ್ಧತೆ ಶುರುವಾಗಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ  ಅನುಮತಿ ನೀಡದ ಕಾರಣ ಸ್ಥಗಿತಗೊಂಡಿದ್ದ  ಮಹಿಷ ದಸರಾವನ್ನು ಈ ಬಾರಿ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ನಿರ್ಧರಿಸಿದೆ. ಸದ್ಯ ಇದುವರೆಗೂ ಮಹಿಷ ದಸರಾ ಆಚರಣೆಗೆ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ. ಆದರೆ  ಇದೇ ಅಕ್ಟೋಬರ್ 15 ರಂದು ಸಾಂಪ್ರದಾಯಿಕ ದಸರಾ ಉದ್ಘಾಟನೆ ಆಗುತ್ತಿದ್ದು, ಅದಕ್ಕೂ 2 ದಿನ ಮುನ್ನವೇ ಮಹಿಷ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣಾ ಸಮಿತಿ ತೀರ್ಮಾನಿಸಿದೆ. ಈ ಸಂಬಂಧ ಕರಪತ್ರವನ್ನೂ ಹಂಚಲಾಗ್ತಿದೆ. ಮಹಿಷ ದಸರ ಆಚರಣೆಗೆ ಸಂಸದ ಪ್ರತಾಪ್ ಸಿಂಹ(Pratap Simha) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘರ್ಷಣೆ ಆದರೂ ಸರಿಯೇ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more