ಎಲ್ಲ ಭಾಷೆಗಳೂ ಭಾರತೀಯತೆಯ ಆತ್ಮ, ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್!

ಎಲ್ಲ ಭಾಷೆಗಳೂ ಭಾರತೀಯತೆಯ ಆತ್ಮ, ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್!

Published : May 22, 2022, 04:38 PM ISTUpdated : May 22, 2022, 04:44 PM IST

ಇತ್ತೀಚೆಗೆ ಕೇಂದ್ರ ಸರ್ಕಾರವು ‘ಹಿಂದಿ ಹೇರಿಕೆ’ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಬಗ್ಗೆ ಮೌನ ಮುರಿದಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರವು ‘ಹಿಂದಿ ಹೇರಿಕೆ’ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಬಗ್ಗೆ ಮೌನ ಮುರಿದಿದ್ದಾರೆ. ‘ಭಾಷೆಯ ಆಧಾರದಲ್ಲಿ ಇಂದು ವಿವಾದ ಹುಟ್ಟಿಸುವ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕು. ಬಿಜೆಪಿ (BJP)ಎಲ್ಲ ಭಾರತೀಯ ಭಾಷೆಗಳನ್ನು ‘ಭಾರತೀಯತೆಯ ಆತ್ಮ’ ಎಂದು ಪರಿಗಣಿಸುತ್ತದೆ’ ಎಂದಿದ್ದಾರೆ. ಈ ಮೂಲಕ ಹಿಂದಿ ಹೇರಿಕೆ ಆರೋಪ ಮಾಡುತ್ತಿರುವ ಪಕ್ಷಗಳು ಹಾಗೂ ವ್ಯಕ್ತಿಗಳಿಗೆ ತಿರುಗೇಟು ನೀಡಿದ್ದಾರೆ.  ಭಾಷಾ ಸಾಮರಸ್ಯ ಕುರಿತಾದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಎಲ್ಲ ಭಾಷೆಗಳೂ ಭಾರತೀಯತೆಯ ಆತ್ಮ ಎಂದಿದ್ದು ಸ್ವಾಗತಾರ್ಹ’ ಎಂದು ಹೇಳಿದರು. ಇದೇ ವೇಳೆ, ‘ಬಾಲಿವುಡ್‌ ನಟ ಅಜಯ ದೇವಗನ್‌ಗೆ (Ajay Devgan) ನೀಡಿದ್ದ ಪ್ರತಿ ಹೇಳಿಕೆ ಚರ್ಚೆ ಹುಟ್ಟುಹಾಕುವ ಅಥವಾ ದೇಶದಲ್ಲಿ ಭಾಷೆಯ ವಿವಾದವನ್ನು ಸೃಷ್ಟಿಸುವ ಉದ್ದೇಶ ಹೊಂದಿರಲಿಲ್ಲ’ ಎಂದು ಸ್ಪಷ್ಟನೆ ನೀಡಿದರು.

‘ದೇಶದಲ್ಲಿ ಯಾವುದೇ ಗಲಭೆ ಅಥವಾ ವಿವಾದ ಸೃಷ್ಟಿಸುವ ಉದ್ದೇಶದಿಂದ ನಾನು ಹೇಳಿಕೆ ನೀಡಿರಲಿಲ್ಲ. ಅದು ಅಚಾನಕ್ಕಾಗಿ ಆಗಿದ್ದು, ಟ್ವೀಟಿನಲ್ಲಿ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆಯಷ್ಟೇ. ಪ್ರಧಾನಿಯವರು ಕೂಡಾ ಎಲ್ಲ ಭಾಷೆಗಳನ್ನು ಗೌರವಿಸುವ ಕುರಿತಾದ ಹೇಳಿಕೆ ನೀಡಿದ್ದಾರೆ. ಇದು ಸ್ವಾಗತಾರ್ಹ. ತಮ್ಮ ತಮ್ಮ ಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಪ್ರಧಾನಿಯವರ ಹೇಳಿಕೆ ಸಂತಸ ನೀಡಿದೆ. ನಾನು ಕೇವಲ ಕನ್ನಡವನ್ನು ಪ್ರತಿನಿಧಿಸುತ್ತಿಲ್ಲ, ಪ್ರಧಾನಿಯವರ ಹೇಳಿಕೆಯಿಂದ ಎಲ್ಲರ ಮಾತೃಭಾಷೆಗೂ ಗೌರವ ಸಿಕ್ಕಂತಾಗಿದೆ. ಮೋದಿಯವರನ್ನು ನಾವು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ, ಒಬ್ಬ ನಾಯಕನಾಗಿಯೂ ನೋಡುತ್ತೇವೆ’ ಎಂದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more