Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು,  9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು, 9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Suvarna News   | Asianet News
Published : Nov 13, 2021, 08:45 AM ISTUpdated : Nov 13, 2021, 09:16 AM IST

ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

 

ಬೆಂಗಳೂರು (ನ. 13): ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ (Ramnath Kovind) ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Award)  ಪ್ರದಾನ ಮಾಡಿ ಗೌರವಿಸಿದರು.

ಖ್ಯಾತ ವೈದ್ಯ ಹಾಗೂ ಶಿಕ್ಷಣ ತಜ್ಞ ಬಿ.ಎಂ. ಹೆಗಡೆ ಅವರಿಗೆ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮನ್ನಿಸಿ ಪದ್ಮವಿಭೂಷಣ ಗೌರವ ಸಮರ್ಪಿಸಲಾಯಿತು. ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಖ್ಯಾತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಡಾ. ಮಂಜಮ್ಮ ಜೋಗಿತಿ ಅವರಿಗೆ ಕರ್ನಾಟಕ ಜಾನಪದ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪದ್ಮಶ್ರೀ ಪುರಸ್ಕಾರವನ್ನು ರಾಷ್ಟ್ರಪತಿಗಳು ನೀಡಿದರು.

ಕರ್ನಾಟಕದ ಖ್ಯಾತ ಅಂಗವಿಕಲ ಕ್ರೀಡಾಪಟು ಹಾಗೂ 2009 ರ ಅಂಗವಿಕಲರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಕೆ.ವೈ. ವೆಂಕಟೇಶ್‌ ಅವರಿಗೆ ಪದ್ಮಶ್ರೀ ನೀಡಲಾಯಿತು. ಸಾಹಿತ್ಯ ಹಾಗೂ ವೇದ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಪ್ರೊ. ಆರ್‌.ಎಲ್‌. ಕಶ್ಯಪ್‌ ಅವರಿಗೆ ಪದ್ಮಶ್ರೀ ಗೌರವ ನೀಡಲಾಯಿತು. ಇನ್ನು ‘ಕನ್ನಡಪ್ರಭ’ ವರ್ಷದ ವ್ಯಕ್ತಿ, ಕಿತ್ತಳೆ ಹಣ್ಣು ಮಾರಿ ಉಳಿಸಿದ ಹಣದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಹಾಜಬ್ಬ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು. ಇನ್ನು ಹಾಲಕ್ಕಿ ಒಕ್ಕಲಿಗ ಸಮುದಾಯದ ತುಳಸಿ ಗೌಡ ಅವರಿಗೆ 3 ಲಕ್ಷ ಗಿಡ ನೆಟ್ಟು ಪರಿಸರ ಉಳಿಸಲು ಶ್ರಮಿಸಿದ್ದಕ್ಕಾಗಿ ಪದ್ಮಶ್ರೀ ನೀಡಲಾಯಿತು. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more