Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು,  9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು, 9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Suvarna News   | Asianet News
Published : Nov 13, 2021, 08:45 AM ISTUpdated : Nov 13, 2021, 09:16 AM IST

ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

 

ಬೆಂಗಳೂರು (ನ. 13): ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ (Ramnath Kovind) ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Award)  ಪ್ರದಾನ ಮಾಡಿ ಗೌರವಿಸಿದರು.

ಖ್ಯಾತ ವೈದ್ಯ ಹಾಗೂ ಶಿಕ್ಷಣ ತಜ್ಞ ಬಿ.ಎಂ. ಹೆಗಡೆ ಅವರಿಗೆ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮನ್ನಿಸಿ ಪದ್ಮವಿಭೂಷಣ ಗೌರವ ಸಮರ್ಪಿಸಲಾಯಿತು. ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಖ್ಯಾತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಡಾ. ಮಂಜಮ್ಮ ಜೋಗಿತಿ ಅವರಿಗೆ ಕರ್ನಾಟಕ ಜಾನಪದ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪದ್ಮಶ್ರೀ ಪುರಸ್ಕಾರವನ್ನು ರಾಷ್ಟ್ರಪತಿಗಳು ನೀಡಿದರು.

ಕರ್ನಾಟಕದ ಖ್ಯಾತ ಅಂಗವಿಕಲ ಕ್ರೀಡಾಪಟು ಹಾಗೂ 2009 ರ ಅಂಗವಿಕಲರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಕೆ.ವೈ. ವೆಂಕಟೇಶ್‌ ಅವರಿಗೆ ಪದ್ಮಶ್ರೀ ನೀಡಲಾಯಿತು. ಸಾಹಿತ್ಯ ಹಾಗೂ ವೇದ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಪ್ರೊ. ಆರ್‌.ಎಲ್‌. ಕಶ್ಯಪ್‌ ಅವರಿಗೆ ಪದ್ಮಶ್ರೀ ಗೌರವ ನೀಡಲಾಯಿತು. ಇನ್ನು ‘ಕನ್ನಡಪ್ರಭ’ ವರ್ಷದ ವ್ಯಕ್ತಿ, ಕಿತ್ತಳೆ ಹಣ್ಣು ಮಾರಿ ಉಳಿಸಿದ ಹಣದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಹಾಜಬ್ಬ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು. ಇನ್ನು ಹಾಲಕ್ಕಿ ಒಕ್ಕಲಿಗ ಸಮುದಾಯದ ತುಳಸಿ ಗೌಡ ಅವರಿಗೆ 3 ಲಕ್ಷ ಗಿಡ ನೆಟ್ಟು ಪರಿಸರ ಉಳಿಸಲು ಶ್ರಮಿಸಿದ್ದಕ್ಕಾಗಿ ಪದ್ಮಶ್ರೀ ನೀಡಲಾಯಿತು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more