Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು,  9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Padma Award 2020: ಕನ್ನಡದ ಹೆಮ್ಮೆ ಹೆಚ್ಚಿಸಿದ ಸಾಧಕರು, 9 ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಗೌರವ

Suvarna News   | Asianet News
Published : Nov 13, 2021, 08:45 AM ISTUpdated : Nov 13, 2021, 09:16 AM IST

ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.

 

ಬೆಂಗಳೂರು (ನ. 13): ವಿವಿಧ ಕ್ಷೇತ್ರಗಳಲ್ಲಿ ಮೇರು ಸಾಧನೆ ಮಾಡಿದ 9 ಮಂದಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ (Ramnath Kovind) ಅವರು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Award)  ಪ್ರದಾನ ಮಾಡಿ ಗೌರವಿಸಿದರು.

ಖ್ಯಾತ ವೈದ್ಯ ಹಾಗೂ ಶಿಕ್ಷಣ ತಜ್ಞ ಬಿ.ಎಂ. ಹೆಗಡೆ ಅವರಿಗೆ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮನ್ನಿಸಿ ಪದ್ಮವಿಭೂಷಣ ಗೌರವ ಸಮರ್ಪಿಸಲಾಯಿತು. ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಖ್ಯಾತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಡಾ. ಮಂಜಮ್ಮ ಜೋಗಿತಿ ಅವರಿಗೆ ಕರ್ನಾಟಕ ಜಾನಪದ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪದ್ಮಶ್ರೀ ಪುರಸ್ಕಾರವನ್ನು ರಾಷ್ಟ್ರಪತಿಗಳು ನೀಡಿದರು.

ಕರ್ನಾಟಕದ ಖ್ಯಾತ ಅಂಗವಿಕಲ ಕ್ರೀಡಾಪಟು ಹಾಗೂ 2009 ರ ಅಂಗವಿಕಲರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದ ಕೆ.ವೈ. ವೆಂಕಟೇಶ್‌ ಅವರಿಗೆ ಪದ್ಮಶ್ರೀ ನೀಡಲಾಯಿತು. ಸಾಹಿತ್ಯ ಹಾಗೂ ವೇದ ಶಿಕ್ಷಣಕ್ಕೆ ನೀಡಿದ ಕೊಡುಗೆಗಾಗಿ ಪ್ರೊ. ಆರ್‌.ಎಲ್‌. ಕಶ್ಯಪ್‌ ಅವರಿಗೆ ಪದ್ಮಶ್ರೀ ಗೌರವ ನೀಡಲಾಯಿತು. ಇನ್ನು ‘ಕನ್ನಡಪ್ರಭ’ ವರ್ಷದ ವ್ಯಕ್ತಿ, ಕಿತ್ತಳೆ ಹಣ್ಣು ಮಾರಿ ಉಳಿಸಿದ ಹಣದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಹಾಜಬ್ಬ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು. ಇನ್ನು ಹಾಲಕ್ಕಿ ಒಕ್ಕಲಿಗ ಸಮುದಾಯದ ತುಳಸಿ ಗೌಡ ಅವರಿಗೆ 3 ಲಕ್ಷ ಗಿಡ ನೆಟ್ಟು ಪರಿಸರ ಉಳಿಸಲು ಶ್ರಮಿಸಿದ್ದಕ್ಕಾಗಿ ಪದ್ಮಶ್ರೀ ನೀಡಲಾಯಿತು. 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more