6 ತಿಂಗಳ ಮೊದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಶುರು: 1ನೇ ತರಗತಿಗೆ ಸೇರಿಸೋಕೆ 6 ವರ್ಷ ಆಗಿರಲೇಬೇಕಾ..?

6 ತಿಂಗಳ ಮೊದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಶುರು: 1ನೇ ತರಗತಿಗೆ ಸೇರಿಸೋಕೆ 6 ವರ್ಷ ಆಗಿರಲೇಬೇಕಾ..?

Published : Oct 07, 2023, 10:31 AM IST

ಮುಂದಿನ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಇನ್ನೂ ಅರ್ಧ ವರ್ಷ ಬಾಕಿ ಇದೆ. ಆಗಲೇ ಕೆಲ ಶಾಲೆಗಳಲ್ಲಿ 2024-25ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದ್ರೆ, ಒಂದನೇ ತರಗತಿಗೆ ಮಕ್ಕಳನ್ನ ಸೇರಿಸಲು ಪೋಷಕರಿಗೆ ಗೊಂದಲ ಶುರುವಾಗಿದೆ. 
 

2023-24ನೇ ಸಾಲಿನ ಶೈಕ್ಷಣಿಕ ವರ್ಷದ ಮಧ್ಯದಲ್ಲಿದ್ದೇವೆ. ಆಗಲೇ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ(enrollment process) ಶುರುವಾಗಿದೆ. 6 ತಿಂಗಳು ಬಾಕಿ ಇರುವಾಗಲೇ ಕೆಲ ಖಾಸಗಿ ಶಾಲೆಗಳು(Schools) ಅಡ್ಮಿಷನ್ ಓಪನ್ ಮಾಡಿವೆ. ಆದ್ರೆ, ಪೋಷಕರಿಗೆ ಎನ್ಇಪಿ-ಎಸ್ಇಪಿ(NEP-SEP)  ಗೊಂದಲ ಶುರುವಾಗಿದೆ. 2023-24ನೇ ಸಾಲಿನಲ್ಲಿ NEP ಅಡಿ 6 ವರ್ಷ ತುಂಬಿದ ಮಕ್ಕಳನ್ನ ಮಾತ್ರ 1ನೇ ತರಗತಿಗೆ ದಾಖಲು ಮಾಡಿಕೊಳ್ಳಲಾಗಿದೆ. ಆದ್ರೆ ಕಾಂಗ್ರೆಸ್(Congress) ಇದನ್ನು ರದ್ದು ಪಡಿಸಿದ್ದು, ಎಸ್ಇಪಿ ಶಿಕ್ಷಣ ಪದ್ಧತಿಯನ್ನೆ ಅನುಸರಿಸೋದಾಗಿ ಹೇಳಿದೆ. ಆದ್ರೆ, ಇದುವರೆಗೂ ಸರ್ಕಾರ ಅಧಿಕೃತ ಆದೇಶ ಹೊರಡಿಸಿಲ್ಲ. ಹೀಗಾಗಿ ತಮ್ಮ ಮಗುವನ್ನು 1ನೇ ತರಗತಿಗೆ ಸೇರಿಸೋಕೆ 6 ವರ್ಷ ಆಗಿರಬೇಕಾ..? ಅಥವಾ 5 ವರ್ಷ ಆಗಿದ್ರೆ ಸಾಕಾ..? ಅನ್ನೋ ಗೊಂದಲ ಪೋಷಕರದ್ದು. ಪೋಷಕರು ತಮ್ಮ ಗೊಂದಲ ಪರಿಹರಿಸಿಕೊಳ್ಳಲು ಶಾಲೆಗಳಿಗೆ ಕರೆ ಮಾಡಿ  ವಿಚಾರಿಸುತ್ತಿದ್ದಾರೆ. ಆದ್ರೆ ಖಾಸಗಿ ಶಾಲೆಗಳಿಗೂ ಈ ಬಗ್ಗೆ ಸ್ಪಷ್ಟತೆ ಇಲ್ಲ. ಕೂಡಲೇ ಶಿಕ್ಷಣ ಇಲಾಖೆ ಈ ಗೊಂದಲವನ್ನ ಪರಿಹರಿಸಬೇಕೆಂದು ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ. NEP ರದ್ದು ಮಾಡಿರುವ ರಾಜ್ಯ ಸರ್ಕಾರ, ಮಕ್ಕಳ ದಾಖಲಾತಿಗೆ ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ ಮಾತ್ರ ಇನ್ನೂ ಸ್ಪಷ್ಟನೆ ನೀಡಿಲ್ಲ. ಆದಷ್ಟು ಬೇಗ ಶಿಕ್ಷಣ ಇಲಾಖೆ ಈ ಗೊಂದಲಕ್ಕೆ ತೆರೆ ಎಳೆಯಲಿ ಎಂದು ಪೋಷಕರು ಒತ್ತಾಯಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more