6 ತಿಂಗಳ ಮೊದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಶುರು: 1ನೇ ತರಗತಿಗೆ ಸೇರಿಸೋಕೆ 6 ವರ್ಷ ಆಗಿರಲೇಬೇಕಾ..?

6 ತಿಂಗಳ ಮೊದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಶುರು: 1ನೇ ತರಗತಿಗೆ ಸೇರಿಸೋಕೆ 6 ವರ್ಷ ಆಗಿರಲೇಬೇಕಾ..?

Published : Oct 07, 2023, 10:31 AM IST

ಮುಂದಿನ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಇನ್ನೂ ಅರ್ಧ ವರ್ಷ ಬಾಕಿ ಇದೆ. ಆಗಲೇ ಕೆಲ ಶಾಲೆಗಳಲ್ಲಿ 2024-25ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆದ್ರೆ, ಒಂದನೇ ತರಗತಿಗೆ ಮಕ್ಕಳನ್ನ ಸೇರಿಸಲು ಪೋಷಕರಿಗೆ ಗೊಂದಲ ಶುರುವಾಗಿದೆ. 
 

2023-24ನೇ ಸಾಲಿನ ಶೈಕ್ಷಣಿಕ ವರ್ಷದ ಮಧ್ಯದಲ್ಲಿದ್ದೇವೆ. ಆಗಲೇ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ(enrollment process) ಶುರುವಾಗಿದೆ. 6 ತಿಂಗಳು ಬಾಕಿ ಇರುವಾಗಲೇ ಕೆಲ ಖಾಸಗಿ ಶಾಲೆಗಳು(Schools) ಅಡ್ಮಿಷನ್ ಓಪನ್ ಮಾಡಿವೆ. ಆದ್ರೆ, ಪೋಷಕರಿಗೆ ಎನ್ಇಪಿ-ಎಸ್ಇಪಿ(NEP-SEP)  ಗೊಂದಲ ಶುರುವಾಗಿದೆ. 2023-24ನೇ ಸಾಲಿನಲ್ಲಿ NEP ಅಡಿ 6 ವರ್ಷ ತುಂಬಿದ ಮಕ್ಕಳನ್ನ ಮಾತ್ರ 1ನೇ ತರಗತಿಗೆ ದಾಖಲು ಮಾಡಿಕೊಳ್ಳಲಾಗಿದೆ. ಆದ್ರೆ ಕಾಂಗ್ರೆಸ್(Congress) ಇದನ್ನು ರದ್ದು ಪಡಿಸಿದ್ದು, ಎಸ್ಇಪಿ ಶಿಕ್ಷಣ ಪದ್ಧತಿಯನ್ನೆ ಅನುಸರಿಸೋದಾಗಿ ಹೇಳಿದೆ. ಆದ್ರೆ, ಇದುವರೆಗೂ ಸರ್ಕಾರ ಅಧಿಕೃತ ಆದೇಶ ಹೊರಡಿಸಿಲ್ಲ. ಹೀಗಾಗಿ ತಮ್ಮ ಮಗುವನ್ನು 1ನೇ ತರಗತಿಗೆ ಸೇರಿಸೋಕೆ 6 ವರ್ಷ ಆಗಿರಬೇಕಾ..? ಅಥವಾ 5 ವರ್ಷ ಆಗಿದ್ರೆ ಸಾಕಾ..? ಅನ್ನೋ ಗೊಂದಲ ಪೋಷಕರದ್ದು. ಪೋಷಕರು ತಮ್ಮ ಗೊಂದಲ ಪರಿಹರಿಸಿಕೊಳ್ಳಲು ಶಾಲೆಗಳಿಗೆ ಕರೆ ಮಾಡಿ  ವಿಚಾರಿಸುತ್ತಿದ್ದಾರೆ. ಆದ್ರೆ ಖಾಸಗಿ ಶಾಲೆಗಳಿಗೂ ಈ ಬಗ್ಗೆ ಸ್ಪಷ್ಟತೆ ಇಲ್ಲ. ಕೂಡಲೇ ಶಿಕ್ಷಣ ಇಲಾಖೆ ಈ ಗೊಂದಲವನ್ನ ಪರಿಹರಿಸಬೇಕೆಂದು ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ. NEP ರದ್ದು ಮಾಡಿರುವ ರಾಜ್ಯ ಸರ್ಕಾರ, ಮಕ್ಕಳ ದಾಖಲಾತಿಗೆ ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ ಮಾತ್ರ ಇನ್ನೂ ಸ್ಪಷ್ಟನೆ ನೀಡಿಲ್ಲ. ಆದಷ್ಟು ಬೇಗ ಶಿಕ್ಷಣ ಇಲಾಖೆ ಈ ಗೊಂದಲಕ್ಕೆ ತೆರೆ ಎಳೆಯಲಿ ಎಂದು ಪೋಷಕರು ಒತ್ತಾಯಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more