ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

ಹಳ್ಳ ಹಿಡಿದ ಬಿಜೆಪಿ ಸರ್ಕಾರದ ಯೋಜನೆ: ತುಕ್ಕು ಹಿಡಿದ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್ !

Published : Aug 22, 2023, 11:08 AM IST

ಬಿಜೆಪಿ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ. ಹಸುಗಳ ರಕ್ಷಣೆಗಾಗಿ ಪಶು ಸಂಜೀವಿನಿ ಆ್ಯಂಬುಲೆನ್ಸ್ ಯೋಜನೆ ಈಗ ಹಳ್ಳ ಹಿಡಿದೆ. ಬಳ್ಳಾರಿ ಆಸ್ಪತ್ರೆಗಳ ಮುಂದೆ ಆ್ಯಂಬುಲೆನ್ಸ್ ತುಕ್ಕು ಹಿಡಿಯುತ್ತಿದಿದ್,ದು ಕೊಟ್ಯಾಂತರ ರೂಪಾಯಿ ಮಣ್ಣುಪಾಲಾಗಿದೆ.
 

ಬಿಜೆಪಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಪಶು ಸಂಜೀವಿನಿ ಆ್ಯಂಬುಲೆನ್ಸ್ (Pashu Sanjeevini Ambulance)ಕೂಡ ಒಂದು..ಹಿಂದೆ ಸಚಿವರಾಗಿದ್ದ ಪ್ರಭು ಚಾವ್ಹಾಣ್ ಕನಸಿನ ಕೂಸು ಈಗ ಹಳ್ಳ ಹಿಡಿದಿದೆ. ಮನುಷ್ಯರಂತೆ ಪ್ರಾಣಿಗಳು ಆರೋಗ್ಯದ ಸಮಸ್ಯೆಯಾದ್ರೆ ಸಹಾಯವಾಗಲಿ ಬಿಜೆಪಿ(BJP) ಅವಧಿಯಲ್ಲಿ ಪಶು ಸಂಜೀವಿನಿ ಯೋಜನೆ(Pashu Sanjeevini Yojana) ಜಾರಿಗೊಳಿಸಲಾಗಿತ್ತು. ಏಕಕಾಲದಲ್ಲಿ 275 ಆ್ಯಂಬುಲೆನ್ಸ್‌ಗೆ ಚಾಲನೆ ನೀಡಲಾಗಿತ್ತು. ಆದ್ರೆ ಈ ಯೋಜನೆಗೆ ಕಾಂಗ್ರೆಸ್ ಸರ್ಕಾರ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದೇ ಬಳ್ಳಾರಿಯ ಪಶುಸಂಗೋಪನೆ ಆಸ್ಪತ್ರೆ ಮುಂದೆ ಆ್ಯಂಬುಲೆನ್ಸ್‌ಗಳು ತುಕ್ಕು ಹಿಡಿಯುತ್ತಿವೆ. ಪಶು ಸಂಗೋಪನಾ ಇಲಾಖೆಯಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ಮಾಡಲು ಈ ಯೋಜನೆ ಘೋಷಿಸಲಾಗಿತ್ತು. 108 ಆ್ಯಂಬುಲೆನ್ಸ್ ಮಾದರಿಯಲ್ಲೇ ಹಸುಗಳಿಗೆ ತಕ್ಷಣ ಚಿಕಿತ್ಸೆ ಕೊಡಿಸಬೇಕು ಅಂತಾ ಪ್ರತಿ ಜಿಲ್ಲೆಗೆ ಈ ಯೋಜನೆ ಜಾರಿಗೊಳಿಸಿತ್ತು.ಅಲ್ದೆ ಇದರ ನಿರ್ವಹಣೆಯನ್ನ ಖಾಸಗಿ ಏಜೆನ್ಸಿಗೆ ನೀಡಿತ್ತು. ಆದ್ರೆ ಸರ್ಕಾರ, ಏಜೆನ್ಸಿ ಮುಂದೆ ಹೊಂದಾಣಿಕೆ ಕೊರತೆಯಿಂದ ಬಹುತೇಕ ಆ್ಯಂಬುಲೆನ್ಸ್‌ಗಳು ಮೊಲೆ ಗುಂಪಾಗಿವೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ನಗರಸಭೆಯಲ್ಲಿ ಭಾರೀ ಗೋಲ್ಮಾಲ್ ಆರೋಪ: ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more