ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

ಮಂಗಳೂರು ಬ್ಲಾಸ್ಟ್‌ ಆರೋಪಿ ಶಾರಿಕ್‌ಗೆ ಪಿಎಫ್ಐ ಸಂಪರ್ಕ..?

Published : Nov 23, 2022, 11:14 PM IST

ಮಂಗಳೂರು ಆಟೋ ರಿಕ್ಷಾ ಬ್ಲಾಸ್ಟ್‌ ಕೇಸ್‌ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ಮಾಹಿತಿಗಳು ಬರುತ್ತಿವೆ. ಈ ನಡುವೆ ಆರೋಪಿ ಮೊಹಮದ್‌ ಶಾರಿಕ್‌ಗೆ ಪಿಎಫ್‌ಐ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ.
 

ಬೆಂಗಳೂರು (ನ.23): ಮಂಗಳೂರು ಬ್ಲಾಸ್ಟರ್‌ ಪ್ರಕರಣದಲ್ಲಿ ಉಗ್ರ ಮೊಹಮದ್‌ ಶಾರಿಕ್‌ಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಸಂಪರ್ಕವಿತ್ತು ಅನ್ನೋದು ಬಹುತೇಕ ಖಚಿತವಾಗಿದೆ. ಇದರ ನಡುವೆ ಈ ಘಟನೆಯಲ್ಲಿ ಬಗೆದಷ್ಟು ಉಗ್ರ ಜಾಲ ಪತ್ತೆಯಾಗುತ್ತಿದೆ.

ಮಂಗಳೂರು ಆಸ್ಪತ್ರೆಯಲ್ಲಿ ಶಾರಿಕ್‌ಗೆ ಚಿಕಿತ್ಸೆ ನಡೆಯುತ್ತಿದೆ. ಶೇಕಡಾ 45 ರಷ್ಟು ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 1 ಕಣ್ಣು ತೆರೆಯಲು ಕೂಡ ಸಾಧ್ಯವಾಗುತ್ತಿಲ್ಲ. ಕೈಗಳು ಸುಟ್ಟಿರೊದ್ರಿಂದ ಬರವಣಿಗೆ ಅಸಾಧ್ಯವಾಗಿದೆ.ಶ್ವಾಸಕೋಶದಲ್ಲಿ ಹೊಗೆ ತುಂಬಿಕೊಂಡಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಭಯೋತ್ಪಾದಕ ಶಾರಿಕ್ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕುತ್ತಿಗೆಯ ಗಾಯಗಳಿಗೆ ತಜ್ಞ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ.

ಫಡ್ನವೀಸ್‌ ಕನಸು ನನಸಾಗುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಈ ನಡುವೆ  ನಿಷೇಧಿತ ಪಿಎಫ್ಐ ಸಂಘಟನೆ ನಾಯಕರ ಜೊತೆ ಶಾರಿಕ್ ಸಂಪರ್ಕ ಹೊಂದಿದ್ದ ಎನ್ನುವುದು ಬಯಲಾಗಿದೆ. ತಮಿಳುನಾಡಿನ ಮಾಜಿ ಪಿಎಫ್ಐ ನಾಯಕರು ಶಾರಿಕ್‌ಗೆ ಬೆಂಬಲ ನೀಡಿದ್ದಾರೆ. ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನಲ್ಲಿ  ಪಿಎಫ್ಐ ನಾಯಕರ ಕೈವಾಡ ಸಾಬೀತಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡಿನಲ್ಲಿ ಉಗ್ರ ಶಾರಿಕ್ ಸಂಚಾರ ಮಾಡಿದ್ದ ಎನ್ನುವುದು ಬಹಿರಂಗವಾಗಿದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more