ಕಾಂಗ್ರೆಸ್‌ಗಿಂತ 5 ಪಟ್ಟು ಅಧಿಕ ಅನುದಾನ ಕೊಟ್ಟ ಪ್ರಧಾನಿ ಮೋದಿ: ರಾಜ್ಯಕ್ಕೆ 7,351 ಕೋಟಿ ರೂ. ಕೊಡುಗೆ

ಕಾಂಗ್ರೆಸ್‌ಗಿಂತ 5 ಪಟ್ಟು ಅಧಿಕ ಅನುದಾನ ಕೊಟ್ಟ ಪ್ರಧಾನಿ ಮೋದಿ: ರಾಜ್ಯಕ್ಕೆ 7,351 ಕೋಟಿ ರೂ. ಕೊಡುಗೆ

Published : Mar 25, 2023, 05:15 PM ISTUpdated : Mar 25, 2023, 05:27 PM IST

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ವರ್ಷ 7,351 ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ದಾವಣೆಗೆರೆ (ಮಾ.25):  ಪ್ರಧಾನಿ ಮೋದಿ ಡಬಲ್ ಎಂಜಿನ್ ಸರ್ಕಾರಕ್ಕೆ 5 ಪಟ್ಟು ಹಣವನ್ನು ಕೇಂದ್ರ ನೀಡಿದೆ. ರಾಷ್ಟ್ರೀಯ ಹೆದ್ದಾರಿಗೆ 6,000 ಕಿಲೋಮೀಟರ್ ರಸ್ತೆಗೆ ಹಣ ಮಂಜೂರು ಮಾಡಲಾಗಿದೆ. ಈ ವರ್ಷ 7,351 ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದಾಹ. 60 ವರ್ಷ ಅಧಿಕಾರದಲ್ಲಿದ್ದರೂ ದೇಶದ ಬಗ್ಗೆ ಕಾಳಜಿ ಇಲ್ಲ, ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಆದರೆ, ಭದ್ರಾ ಮೇಲ್ಡಂಡೆ ಯೋಜನೆಗೆ 5,000 ಕೋಟಿ ರೂಪಾಯಿ ನೀಡಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇಂದು ದಾವಣೆಗೆರೆಯಲ್ಲಿ ಆಯೋಜಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ಪಾಲ್ಗೊಂಡು ಬೊಮ್ಮಾಯಿ ಮಾತನಾಡಿದ್ದಾರೆ. 

ಎಲ್ಲಾ ದೇಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತಕ್ಕೆ ಗೌರವ ನೀಡುತ್ತಿದೆ. ಪಾಕಿಸ್ತಾನದಲ್ಲಿ ಅಲ್ಲಿಯ ಸಾಮಾನ್ಯ ಜನ, ನಮಗೆ ನರೇಂದ್ರ ಮೋದಿಯಂತ ನಾಯಕತ್ವ ಬೇಕು ಎಂದು ಹೇಳುತ್ತಿದೆ. ಕೋವಿಡ್ ಸಂಪೂರ್ಣವಾಗಿ ನಿಯಂತ್ರಣ ಮಾಡಿ ಭಾರತವನ್ನು ಮುನ್ನಡೆಬಲ್ಲ ಮೋದಿ ನಾಯಕತ್ವ ಚೀನಾಗೆ ಬೇಕು ಎಂದು ಚೀನಾದ ಪತ್ರಿಕೆ ಹೇಳುತ್ತಿದೆ.  ಆದರೆ ನಮ್ಮರು, ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿ ಟೀಕೆ ಮಾಡಿ, ಭಾರತದ ಪ್ರಜಾಪ್ರಭುತ್ವವನ್ನು ವಿರೋಧಿ ಇತರ ದೇಶಗಳ ನೆರವು ಪಡೆಯುತ್ತಿದ್ದಾರೆ. ಇಂತಹ ನಾಯಕತ್ವ ನಮಗೆ ಬೇಕಾ ಅನ್ನೋದನ್ನು ನಾವು ಯೋಚಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more