ಕಾಂಗ್ರೆಸ್‌ಗಿಂತ 5 ಪಟ್ಟು ಅಧಿಕ ಅನುದಾನ ಕೊಟ್ಟ ಪ್ರಧಾನಿ ಮೋದಿ: ರಾಜ್ಯಕ್ಕೆ 7,351 ಕೋಟಿ ರೂ. ಕೊಡುಗೆ

ಕಾಂಗ್ರೆಸ್‌ಗಿಂತ 5 ಪಟ್ಟು ಅಧಿಕ ಅನುದಾನ ಕೊಟ್ಟ ಪ್ರಧಾನಿ ಮೋದಿ: ರಾಜ್ಯಕ್ಕೆ 7,351 ಕೋಟಿ ರೂ. ಕೊಡುಗೆ

Published : Mar 25, 2023, 05:15 PM ISTUpdated : Mar 25, 2023, 05:27 PM IST

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ವರ್ಷ 7,351 ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ದಾವಣೆಗೆರೆ (ಮಾ.25):  ಪ್ರಧಾನಿ ಮೋದಿ ಡಬಲ್ ಎಂಜಿನ್ ಸರ್ಕಾರಕ್ಕೆ 5 ಪಟ್ಟು ಹಣವನ್ನು ಕೇಂದ್ರ ನೀಡಿದೆ. ರಾಷ್ಟ್ರೀಯ ಹೆದ್ದಾರಿಗೆ 6,000 ಕಿಲೋಮೀಟರ್ ರಸ್ತೆಗೆ ಹಣ ಮಂಜೂರು ಮಾಡಲಾಗಿದೆ. ಈ ವರ್ಷ 7,351 ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದಾಹ. 60 ವರ್ಷ ಅಧಿಕಾರದಲ್ಲಿದ್ದರೂ ದೇಶದ ಬಗ್ಗೆ ಕಾಳಜಿ ಇಲ್ಲ, ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಆದರೆ, ಭದ್ರಾ ಮೇಲ್ಡಂಡೆ ಯೋಜನೆಗೆ 5,000 ಕೋಟಿ ರೂಪಾಯಿ ನೀಡಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇಂದು ದಾವಣೆಗೆರೆಯಲ್ಲಿ ಆಯೋಜಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ಪಾಲ್ಗೊಂಡು ಬೊಮ್ಮಾಯಿ ಮಾತನಾಡಿದ್ದಾರೆ. 

ಎಲ್ಲಾ ದೇಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತಕ್ಕೆ ಗೌರವ ನೀಡುತ್ತಿದೆ. ಪಾಕಿಸ್ತಾನದಲ್ಲಿ ಅಲ್ಲಿಯ ಸಾಮಾನ್ಯ ಜನ, ನಮಗೆ ನರೇಂದ್ರ ಮೋದಿಯಂತ ನಾಯಕತ್ವ ಬೇಕು ಎಂದು ಹೇಳುತ್ತಿದೆ. ಕೋವಿಡ್ ಸಂಪೂರ್ಣವಾಗಿ ನಿಯಂತ್ರಣ ಮಾಡಿ ಭಾರತವನ್ನು ಮುನ್ನಡೆಬಲ್ಲ ಮೋದಿ ನಾಯಕತ್ವ ಚೀನಾಗೆ ಬೇಕು ಎಂದು ಚೀನಾದ ಪತ್ರಿಕೆ ಹೇಳುತ್ತಿದೆ.  ಆದರೆ ನಮ್ಮರು, ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿ ಟೀಕೆ ಮಾಡಿ, ಭಾರತದ ಪ್ರಜಾಪ್ರಭುತ್ವವನ್ನು ವಿರೋಧಿ ಇತರ ದೇಶಗಳ ನೆರವು ಪಡೆಯುತ್ತಿದ್ದಾರೆ. ಇಂತಹ ನಾಯಕತ್ವ ನಮಗೆ ಬೇಕಾ ಅನ್ನೋದನ್ನು ನಾವು ಯೋಚಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more